ಉಪ ಸಮಿತಿಯ ಸಭೆಯ ಬಳಿಕ ಸಚಿವ ಆನಂದ್ ಸಿಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ, ‘ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ವರದಿಯನ್ನು ಯಥಾವತ್ತಾಗಿ ಜಾರಿ ಮಾಡದಂತೆ ಆಗ್ರಹಿಸಿ ಕೇಂದ್ರ ಪತ್ರ ಬರೆಯುವ ತೀರ್ಮಾನವನ್ನು ಸಮಿತಿ ಕೈಗೊಂಡಿದೆ’ ಎಂದರು.