<p><strong>ಬೆಂಗಳೂರು:</strong> ಬಾಯಿ ಕ್ಯಾನ್ಸರ್ಗೆ ಕಾರಣವಾಗುವ 114 ವಂಶವಾಹಿ ರೂಪಾಂತರಗಳನ್ನು ತಜ್ಞರು ಪತ್ತೆ ಮಾಡಿದ್ದು, ಇದರಿಂದಾಗಿ ನಿರ್ದಿಷ್ಟ ಜೀವಕೋಶ ಕೇಂದ್ರಿತ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ.</p>.<p>ಎಚ್ಸಿಜಿ ತಜ್ಞ ವೈದ್ಯರ ಸಹಯೋಗದಲ್ಲಿ ಸರ್ಕಾರದ ‘ಐಬ್ಯಾಬ್’ (ಇನ್ಸ್ಟಿಟ್ಯೂಟ್ ಆಫ್ ಬಯೊಇನ್ಫಾರ್ಮಾಟಿಕ್ಸ್ ಆಂಡ್ ಅಪ್ಲೈಡ್ ಬಯೊಟೆಕ್ನಾಲಜಿ–ಐಬಿಎಬಿ) ಸಂಸ್ಥೆಯು ಈ ಮಹತ್ವದ ಸಂಶೋಧನೆ ಕೈಗೊಂಡು ರೂಪಾಂತರಗಳನ್ನು ಪತ್ತೆ ಮಾಡಿದೆ.</p>.<p>ಕ್ಯಾನ್ಸರ್ನಿಂದ ಬದುಕುಳಿಯುವ ಸಾಧ್ಯತೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪ್ರಮುಖ ವಂಶವಾಹಿಗಳನ್ನು ಸಹ ಈ ಸಂಶೋಧನೆಯಲ್ಲಿ ಗುರುತಿಸಲಾಗಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ವಿವರ ನೀಡಿದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ‘ವಂಶವಾಹಿ ಅನುಕ್ರಮಣಿಕೆ ವಿಶ್ಲೇಷಣೆ ಆಧಾರಿತವಾಗಿ ನಡೆದಿರುವ ಈ ಸಂಶೋಧನೆಯು ಬಾಯಿ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಪಟ್ಟಂತೆ ಹೊಸ ಆಶಾಕಿರಣ ಮೂಡಿಸಿದ್ದು, ಜನರ ಜೀವ ಉಳಿಸಲು ಸಹಕಾರಿಯಾಗಲಿದೆ’ ಎಂದರು.</p>.<p>‘ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಿಂದ ಸ್ಥಾಪಿತವಾಗಿರುವ ಐಬ್ಯಾಬ್ ಸಂಸ್ಥೆಯು, ಅತ್ಯಾಧುನಿಕ ಜಿನೊಮಿಕ್ಸ್ ವ್ಯವಸ್ಥೆ ಬಳಸಿ ನಡೆಸಿದ ಸಂಶೋಧನೆ ಇದಾಗಿದೆ. ಜತೆಗೆ, ಸುಧಾರಿತ ಮೆಷಿನ್ ಲರ್ನಿಂಗ್ ಮತ್ತು ಬಯೊಇನ್ಫಾರ್ಮ್ಯಾಟಿಕ್ಸ್ ಉಪಯೋಗಿಸಿಕೊಂಡು ಈ ಅಧ್ಯಯನ ನಡೆಸಲಾಗಿದೆ’ ಎಂದು ಸಚಿವರು ವಿವರಿಸಿದರು.</p>.<p>‘ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40ರಷ್ಟು ಬಾಯಿ ಕ್ಯಾನ್ಸರ್ ರೋಗಿಗಳಿದ್ದಾರೆ. ಭಾರತದ ರೋಗಿಗಳನ್ನೇ ಆಯ್ಕೆ ಮಾಡಿಕೊಂಡು ನಡೆಸಲಾಗಿರುವ ಮೊತ್ತಮೊದಲ ವಿಸ್ತೃತ ಅಧ್ಯಯನ ಇದಾಗಿದೆ. ಈ ಅಧ್ಯಯನದ ದತ್ತಾಂಶಗಳನ್ನು ಪಾಶ್ಚಿಮಾತ್ಯ ವಂಶವಾಹಿ ಅಧ್ಯಯನಗಳ ಜತೆಗೂ ಹೋಲಿಕೆ ಮಾಡಿ ವಿಶ್ಲೇಷಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಬಾಯಿ ಕ್ಯಾನ್ಸರ್ಗೆ ಕಾರಣವಾಗುವ 114 ವಂಶವಾಹಿ ರೂಪಾಂತರಗಳ ಪೈಕಿ 35 ರೂಪಾಂತರಗಳು ಆಂಕೋಜೀನ್ಗಳಾದರೆ, 11 ಟ್ಯೂಮರ್ ಸಪ್ರೆಸರ್ಗಳಾಗಿದ್ದು, 2 ಡಿಎನ್ಎ ದುರಸ್ತಿ ವಂಶವಾಹಿಗಳಾಗಿವೆ ಎಂಬುದನ್ನು ಗುರುತಿಸಲಾಗಿದೆ’ ಎಂದರು. ‘ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಸಂಸ್ಥೆಗಳು ಈ ಸಂಶೋಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿವೆ. ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕೆಗಳಲ್ಲಿ ಈ ಕುರಿತು ಅಧ್ಯಯನ ವರದಿ ಪ್ರಕಟಗೊಂಡಿದೆ’ ಎಂದು ತಿಳಿಸಿದರು.</p>.<p>ಎಚ್ಸಿಜಿ ಕ್ಯಾನ್ಸರ್ ಕೇಂದ್ರದ ಡೀನ್ ಡಾ.ವಿಶಾಲ್ ರಾವ್, ‘ರಾಜ್ಯ ಸರ್ಕಾರವು ಚಿಕಿತ್ಸಕರು ಹಾಗೂ ಸಂಶೋಧಕರು ಒಂದೆಡೆ ಸೇರಿ ಅಧ್ಯಯನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದ್ದರಿಂದ ಸಂಶೋಧನೆ ಸಾಧ್ಯವಾಗಿದೆ’ ಎಂದರು.</p>.<p>‘ಇದುವರೆಗೆ ಬಾಯಿ ಕ್ಯಾನ್ಸರ್ಗೆ ಉತ್ತಮ ಚಿಕಿತ್ಸೆ ನೀಡಿದರೂ ಶೇ 50ರಷ್ಟು ಪ್ರಕರಣಗಳಲ್ಲಿ ರೋಗ ಮರುಕಳಿಸುತ್ತಿತ್ತು. ಆದರೆ, ಈ ಸಂಶೋಧನೆಯು ರೋಗ ಮರುಕಳಿಸದಂತೆ ಚಿಕಿತ್ಸೆ ನೀಡಲು ಸಹಕಾರಿ<br />ಯಾಗಲಿದೆ’ ಎಂದು ಐಬ್ಯಾಬ್ ಪ್ರಾಧ್ಯಾಪಕರಾದ ವಿಭಾ ಚೌಧರಿ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಯಿ ಕ್ಯಾನ್ಸರ್ಗೆ ಕಾರಣವಾಗುವ 114 ವಂಶವಾಹಿ ರೂಪಾಂತರಗಳನ್ನು ತಜ್ಞರು ಪತ್ತೆ ಮಾಡಿದ್ದು, ಇದರಿಂದಾಗಿ ನಿರ್ದಿಷ್ಟ ಜೀವಕೋಶ ಕೇಂದ್ರಿತ ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ.</p>.<p>ಎಚ್ಸಿಜಿ ತಜ್ಞ ವೈದ್ಯರ ಸಹಯೋಗದಲ್ಲಿ ಸರ್ಕಾರದ ‘ಐಬ್ಯಾಬ್’ (ಇನ್ಸ್ಟಿಟ್ಯೂಟ್ ಆಫ್ ಬಯೊಇನ್ಫಾರ್ಮಾಟಿಕ್ಸ್ ಆಂಡ್ ಅಪ್ಲೈಡ್ ಬಯೊಟೆಕ್ನಾಲಜಿ–ಐಬಿಎಬಿ) ಸಂಸ್ಥೆಯು ಈ ಮಹತ್ವದ ಸಂಶೋಧನೆ ಕೈಗೊಂಡು ರೂಪಾಂತರಗಳನ್ನು ಪತ್ತೆ ಮಾಡಿದೆ.</p>.<p>ಕ್ಯಾನ್ಸರ್ನಿಂದ ಬದುಕುಳಿಯುವ ಸಾಧ್ಯತೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪ್ರಮುಖ ವಂಶವಾಹಿಗಳನ್ನು ಸಹ ಈ ಸಂಶೋಧನೆಯಲ್ಲಿ ಗುರುತಿಸಲಾಗಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ವಿವರ ನೀಡಿದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ‘ವಂಶವಾಹಿ ಅನುಕ್ರಮಣಿಕೆ ವಿಶ್ಲೇಷಣೆ ಆಧಾರಿತವಾಗಿ ನಡೆದಿರುವ ಈ ಸಂಶೋಧನೆಯು ಬಾಯಿ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಪಟ್ಟಂತೆ ಹೊಸ ಆಶಾಕಿರಣ ಮೂಡಿಸಿದ್ದು, ಜನರ ಜೀವ ಉಳಿಸಲು ಸಹಕಾರಿಯಾಗಲಿದೆ’ ಎಂದರು.</p>.<p>‘ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಿಂದ ಸ್ಥಾಪಿತವಾಗಿರುವ ಐಬ್ಯಾಬ್ ಸಂಸ್ಥೆಯು, ಅತ್ಯಾಧುನಿಕ ಜಿನೊಮಿಕ್ಸ್ ವ್ಯವಸ್ಥೆ ಬಳಸಿ ನಡೆಸಿದ ಸಂಶೋಧನೆ ಇದಾಗಿದೆ. ಜತೆಗೆ, ಸುಧಾರಿತ ಮೆಷಿನ್ ಲರ್ನಿಂಗ್ ಮತ್ತು ಬಯೊಇನ್ಫಾರ್ಮ್ಯಾಟಿಕ್ಸ್ ಉಪಯೋಗಿಸಿಕೊಂಡು ಈ ಅಧ್ಯಯನ ನಡೆಸಲಾಗಿದೆ’ ಎಂದು ಸಚಿವರು ವಿವರಿಸಿದರು.</p>.<p>‘ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇ 40ರಷ್ಟು ಬಾಯಿ ಕ್ಯಾನ್ಸರ್ ರೋಗಿಗಳಿದ್ದಾರೆ. ಭಾರತದ ರೋಗಿಗಳನ್ನೇ ಆಯ್ಕೆ ಮಾಡಿಕೊಂಡು ನಡೆಸಲಾಗಿರುವ ಮೊತ್ತಮೊದಲ ವಿಸ್ತೃತ ಅಧ್ಯಯನ ಇದಾಗಿದೆ. ಈ ಅಧ್ಯಯನದ ದತ್ತಾಂಶಗಳನ್ನು ಪಾಶ್ಚಿಮಾತ್ಯ ವಂಶವಾಹಿ ಅಧ್ಯಯನಗಳ ಜತೆಗೂ ಹೋಲಿಕೆ ಮಾಡಿ ವಿಶ್ಲೇಷಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಬಾಯಿ ಕ್ಯಾನ್ಸರ್ಗೆ ಕಾರಣವಾಗುವ 114 ವಂಶವಾಹಿ ರೂಪಾಂತರಗಳ ಪೈಕಿ 35 ರೂಪಾಂತರಗಳು ಆಂಕೋಜೀನ್ಗಳಾದರೆ, 11 ಟ್ಯೂಮರ್ ಸಪ್ರೆಸರ್ಗಳಾಗಿದ್ದು, 2 ಡಿಎನ್ಎ ದುರಸ್ತಿ ವಂಶವಾಹಿಗಳಾಗಿವೆ ಎಂಬುದನ್ನು ಗುರುತಿಸಲಾಗಿದೆ’ ಎಂದರು. ‘ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಸಂಸ್ಥೆಗಳು ಈ ಸಂಶೋಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿವೆ. ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕೆಗಳಲ್ಲಿ ಈ ಕುರಿತು ಅಧ್ಯಯನ ವರದಿ ಪ್ರಕಟಗೊಂಡಿದೆ’ ಎಂದು ತಿಳಿಸಿದರು.</p>.<p>ಎಚ್ಸಿಜಿ ಕ್ಯಾನ್ಸರ್ ಕೇಂದ್ರದ ಡೀನ್ ಡಾ.ವಿಶಾಲ್ ರಾವ್, ‘ರಾಜ್ಯ ಸರ್ಕಾರವು ಚಿಕಿತ್ಸಕರು ಹಾಗೂ ಸಂಶೋಧಕರು ಒಂದೆಡೆ ಸೇರಿ ಅಧ್ಯಯನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದ್ದರಿಂದ ಸಂಶೋಧನೆ ಸಾಧ್ಯವಾಗಿದೆ’ ಎಂದರು.</p>.<p>‘ಇದುವರೆಗೆ ಬಾಯಿ ಕ್ಯಾನ್ಸರ್ಗೆ ಉತ್ತಮ ಚಿಕಿತ್ಸೆ ನೀಡಿದರೂ ಶೇ 50ರಷ್ಟು ಪ್ರಕರಣಗಳಲ್ಲಿ ರೋಗ ಮರುಕಳಿಸುತ್ತಿತ್ತು. ಆದರೆ, ಈ ಸಂಶೋಧನೆಯು ರೋಗ ಮರುಕಳಿಸದಂತೆ ಚಿಕಿತ್ಸೆ ನೀಡಲು ಸಹಕಾರಿ<br />ಯಾಗಲಿದೆ’ ಎಂದು ಐಬ್ಯಾಬ್ ಪ್ರಾಧ್ಯಾಪಕರಾದ ವಿಭಾ ಚೌಧರಿ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>