ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಘಟಪ್ರಭಾ ಬಲದಂಡೆ ಕಾಲುವೆಗೆ ಕಾರು ಉರುಳಿ ನಾಲ್ವರು ಸಾವು

ಸಾವಿಗೀಡಾದವರು ರಾಮದುರ್ಗ ತಾಲ್ಲೂಕಿನವರು
Last Updated 22 ಅಕ್ಟೋಬರ್ 2021, 6:55 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಲೋಕಾಪುರ ಬಳಿಯ ಹಲಕಿ- ಮೆಟಗುಡ್ಡ ರಸ್ತೆ ಪಕ್ಕದಲ್ಲಿ ಹರಿಯುವ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ತಡರಾತ್ರಿ ಕಾರು ಉರುಳಿ ಬಿದ್ದು ನಾಲ್ವರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬೀಡಕಿ ಗ್ರಾಮದ ಸುನಿಲ್ ಸದಪ್ಪ ಆರೆಬಿಂಚಿ (24) ಗುಡಮ್ಮನಾಳ ಗ್ರಾಮದ ಮಹಾದೇವಗೌಡ ಶಂಕರಗೌಡ ಪಾಟೀಲ (27), ಮುದೇನಕೊಪ್ಪ ಗ್ರಾಮದ ಎರ್ರಿತಾತಾ ಮೌನೇಶ ಕಂಬಾರ (26), ರಾಮಾಪುರ ಗ್ರಾಮದ ವಿಜಯ ಶಿವಾನಂದ ಲಟ್ಟಿ (26) ಮೃತರು.

ಮುಧೋಳ ಕಡೆಯಿಂದ ಸಾಲಹಳ್ಳಿ ಕಡೆಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಲಕಿ ಹತ್ತಿರ ಕಾಲುವೆಗೆ ಉರುಳಿ ಬಿದ್ದಿದೆ. ಈ ವೇಳೆ ಚಾಲಕ ಸುನಿಲ್ ಸೇರಿ ನಾಲ್ವರು ಸ್ಧಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅದೇ ಕಾರಿನಲ್ಲಿದ್ದ ಈರಣ್ಣಾ ಘಾಠಿ ಮತ್ತು ಫರಾನಾ ಅತ್ತಿಕಾ ಅವರಿಗೆ ಗಾಯಗಳಾಗಿದ್ದು, ಈಜಿಕೊಂಡು ದಡ ಸೇರಿದ್ದಾರೆ. ಗಾಯಾಳುಗಳು ಮುಧೋಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರೇನ್‌ ಸಹಾಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರು ಹಾಗೂ ಶವಗಳನ್ನು ಹೊರಗೆ ತೆಗೆದರು. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT