<p><strong>ಬೆಂಗಳೂರು:</strong> 'ರೈತರು, ಕನ್ನಡ ಪರ ಸಂಘಟನೆಗಳ ಮೇಲೆ ಕಾರಣ ಇಲ್ಲದೆ ಹಿಂದಿನ ಸರ್ಕಾರ ಕೇಸ್ಗಳನ್ನು ಹಾಕಿದೆ. ಅದನ್ನು ಹಿಂಪಡೆಯುವಂತೆ ಆದೇಶ ಹೊರಡಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಕೇಸ್ ವಾಪಸು ಪಡೆಯುವಂತೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ‘ಈ ಪತ್ರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ. ಪ್ರಕರಣ ವಾಪಸ್ ಪಡೆಯಲು ಆದೇಶ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಅಪ್ಪಚ್ಚು ರಂಜನ್ ಸಚಿವ ಸ್ಥಾನ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಗೊಂದಲ ಏನೂ ಇಲ್ಲ. ಸಂಪುಟದಲ್ಲಿ ಸ್ಥಾನ ಖಾಲಿ ಇದೆ. ಅದಕ್ಕೆ ಬೇಡಿಕೆ ಇಟ್ಟಿದ್ದಾರೆ. ಅವರು ಕೂಡ ಪಕ್ಷದಲ್ಲಿ ಹಿರಿಯರು’ ಎಂದರು.</p>.<p>ಮಾತಿನ ಮಧ್ಯೆ ಈಶ್ವರಪ್ಪ ಅವಾಚ್ಯ ಪದ ಬಳಸಿದ ಬಗ್ಗೆ, ‘ಪಕ್ಷದವರು, ಸಂಘಟನೆಯವರ ಕಗ್ಗೊಲೆಗಳು ಆಗಿವೆ. ಆ ನೋವಿನ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ. ಅದನ್ನು ಬೆಳೆಸುವುದು ಬೇಡ’ ಎಂದು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ರೈತರು, ಕನ್ನಡ ಪರ ಸಂಘಟನೆಗಳ ಮೇಲೆ ಕಾರಣ ಇಲ್ಲದೆ ಹಿಂದಿನ ಸರ್ಕಾರ ಕೇಸ್ಗಳನ್ನು ಹಾಕಿದೆ. ಅದನ್ನು ಹಿಂಪಡೆಯುವಂತೆ ಆದೇಶ ಹೊರಡಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ಕೇಸ್ ವಾಪಸು ಪಡೆಯುವಂತೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ‘ಈ ಪತ್ರದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ. ಪ್ರಕರಣ ವಾಪಸ್ ಪಡೆಯಲು ಆದೇಶ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಅಪ್ಪಚ್ಚು ರಂಜನ್ ಸಚಿವ ಸ್ಥಾನ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಗೊಂದಲ ಏನೂ ಇಲ್ಲ. ಸಂಪುಟದಲ್ಲಿ ಸ್ಥಾನ ಖಾಲಿ ಇದೆ. ಅದಕ್ಕೆ ಬೇಡಿಕೆ ಇಟ್ಟಿದ್ದಾರೆ. ಅವರು ಕೂಡ ಪಕ್ಷದಲ್ಲಿ ಹಿರಿಯರು’ ಎಂದರು.</p>.<p>ಮಾತಿನ ಮಧ್ಯೆ ಈಶ್ವರಪ್ಪ ಅವಾಚ್ಯ ಪದ ಬಳಸಿದ ಬಗ್ಗೆ, ‘ಪಕ್ಷದವರು, ಸಂಘಟನೆಯವರ ಕಗ್ಗೊಲೆಗಳು ಆಗಿವೆ. ಆ ನೋವಿನ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ. ಅದನ್ನು ಬೆಳೆಸುವುದು ಬೇಡ’ ಎಂದು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>