‘ಕನಿಷ್ಠ ಎರಡು ವರ್ಷ ಪೂರ್ಣಗೊಳ್ಳುವ ಮುನ್ನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆ ರಾಜ್ಯ ಸರ್ಕಾರ ಮಂಡಳಿ ರಚನೆ ಮಾಡಿತ್ತು. ಆದರೆ, ಪ್ರಸ್ತುತ ಮಂಡಳಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಆಡಳಿತದ ಮುಖ್ಯಸ್ಥರ ವಿವೇಚನಾ ಅಧಿಕಾರ ಬಳಸಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ’ ಎಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು.