ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೊಣೆಯನ್ನು ಹೆಚ್ಚುವರಿ ಪ್ರಭಾರ ಆಗಿ ನಿಗಮದ ಮೈಸೂರು ವಿಭಾಗದ ಮುಖ್ಯ ಎಂಜಿನಿಯರ್ (ನೀರಾವರಿ ವಲಯ – ದಕ್ಷಿಣ) ಶಂಕರೇಗೌಡ ಅವರಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೆ. ಜೈಪ್ರಕಾಶ್ ಅವರು ಮೇ 31ರಂದು ನಿವೃತ್ತರಾಗಿದ್ದರು. ಅವರು ನಿವೃತ್ತಿಯಾದ ತಕ್ಷಣವೇ ಹುದ್ದೆಯ ಹೊಣೆಯನ್ನು ಮತ್ತೊಬ್ಬ ಅಧಿಕಾರಿಗೆ ವಹಿಸದಿರುವ ಬಗ್ಗೆ ನಿಗಮದಲ್ಲಿ ಅಪಸ್ವರ ಕೇಳಿಬಂದಿತ್ತು.