ಬೆಂಗಳೂರು: ಇಲ್ಲಿನ ಸದಾಶಿವನಗರದ ಡಿ.ಕೆ. ಶಿವಕುಮಾರ್ ಮನೆ ಸೇರಿದಂತೆ 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ, ರಾಜ್ಯ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ ಸೇರಿದಂತೆ ಹಲವು ಪ್ರಮುಖರು ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಬಳಿ ದೌಡಾಯಿಸಿದರು.
‘ಸಿಬಿಐ ಅಧಿಕಾರಿಗಳ ದಾಳಿಗೆ ರಾಜ್ಯ ಸರ್ಕಾರ ಅನುಮತಿ ಕೊಡಬೇಕು. ಅದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ತಡೆಯಾಜ್ಞೆ ಇರುವಾಗ ದಾಳಿ ಹೇಗೆ ನಡೆಸುತ್ತಾರೆ’ ಎಂದು ಡಿ.ಕೆ. ಶಿವಕುಮಾರ್ ಪರ ವಕೀಲರೂ ಆಗಿರುವ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಹೇಳಿದರು.
‘ಮುಕ್ತವಾದ ತನಿಖೆಗೆ ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಅದು ನ್ಯಾಯುಬದ್ಧವಾದ ತನಿಖೆ ನಡೆಸಲಿ. ಇದು ರಾಜಕೀಯ ಪ್ರೇರಿತ’ ಎಂದೂ ದೂರಿದರು