ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ. ಪ್ರಕರಣ: ಆಪ್ತನ ಮೂಲಕ ದೂರು ನೀಡಿದ ರಮೇಶ ಜಾರಕಿಹೊಳಿ

Last Updated 13 ಮಾರ್ಚ್ 2021, 12:03 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣದ ವಿಚಾರಣೆಯನ್ನು ಎಸ್ಐಟಿ ನಡೆಸುತ್ತಿರುವ ಬೆನ್ನಲ್ಲೇ ರಮೇಶ ಜಾರಕಿಹೊಳಿ ಅವರು ಆಪ್ತನ ಮೂಲಕ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ ಎಂದು ಗೊತ್ತಾಗಿದೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಾಗರಾಜ್ ಅವರ ಮೂಲಕ ದೂರಿನ ಪ್ರತಿಯನ್ನು ಸದಾಶಿವನಗರ ಠಾಣೆ ಇನ್‌ಸ್ಪೆಕ್ಟರ್ ಅವರಿಗೆ ನೀಡಲಾಗಿದೆ.

ಮಧ್ಯಾಹ್ನ ಠಾಣೆಗೆ ಬಂದಿದ್ದ ನಾಗರಾಜ್, ಎರಡು ಪುಟಗಳ ದೂರು ನೀಡಿ ಹೋದರು.

'ನಕಲಿ ಸಿ.ಡಿ ಸೃಷ್ಟಿಸಿ ಬ್ಲ್ಯಾಕ್‌ಮೇಲ್ ಮಾಡಿ ತೇಜೋವಧೆಗೆ ಯತ್ನಿಸಿದ್ದಾರೆ' ಎಂಬುದಾಗಿ ದೂರಿನಲ್ಲಿ ಆರೋಪಿಸಿರುವ ಮಾಹಿತಿ ಸಿಕ್ಕಿದೆ. ದೂರಿನ ಬಗ್ಗೆ ಇನ್‌ಸ್ಪೆಕ್ಟರ್, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೂರಿನ ಪರಿಶೀಲನೆ ನಡೆಯುತ್ತಿದ್ದು, ಸದ್ಯಕ್ಕೆ ಎಫ್ಐಆರ್ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT