<p><strong>ಬೆಂಗಳೂರು</strong>: ಸಿ.ಡಿ. ಪ್ರಕರಣದಲ್ಲಿ ಯುವತಿ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ನಂತರ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಬಂಧನ ಭೀತಿ ಶುರುವಾಗಿದ್ದು, ಇದೀಗ ಎಸ್ಐಟಿ ವಿಚಾರಣೆಗೂ ಅವರು ಗೈರಾಗಿದ್ದಾರೆ.</p>.<p>ನ್ಯಾಯಾಲಯದ ಎದುರು ಹಾಜರಾಗಿ ಸಿಆರ್ಪಿಸಿ 164ರಡಿ ಹೇಳಿಕೆ ನೀಡಿರುವ ಸಂತ್ರಸ್ತೆ, ವಿಚಾರಣೆ ಹಾಗೂ ಮಹಜರು ಪ್ರಕ್ರಿಯೆಗೆ ಸಹಕರಿಸಿದ್ದಾರೆ.</p>.<p>ಪ್ರಕರಣದ ಆರೋಪಿಯಾಗಿರುವ ರಮೇಶ ಜಾರಕಿಹೊಳಿ ಅವರನ್ನು ಶುಕ್ರವಾರ ಬೆಳಿಗ್ಗೆ ವಿಚಾರಣೆ ನಡೆಸಲು ಎಸ್ಐಟಿ ಸಿದ್ಧವಾಗಿತ್ತು. ಆದರೆ, ರಮೇಶ ಮಧ್ಯಾಹ್ನದವರೆಗೂ ವಿಚಾರಣೆಗೆ ಬರಲಿಲ್ಲ.</p>.<p>ಅವರ ಪರವಾಗಿ ಎಸ್ಐಟಿ ಕಚೇರಿಗೆ ಬಂದಿದ್ದ ವಕೀಲ ಶ್ಯಾಮಸುಂದರ್, ರಮೇಶ ಅವರು ನೀಡಿದ್ದ ಪತ್ರವೊಂದನ್ನು ಅಧಿಕಾರಿಗಳಿಗೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>'ನನಗೆ ವಿಪರೀತ ಜ್ವರವಿದೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದು, ವಿಶ್ರಾಂತಿ ಪಡೆಯುವಂಯೆ ವೈದ್ಯರು ತಿಳಿಸಿದ್ದಾರೆ. ಹೀಗಾಗಿ, ವಿಚಾರಣೆಗೆ ಬರಲು ಆಗುತ್ತಿಲ್ಲ' ಎಂದು ಪತ್ರದಲ್ಲಿ ಹೇಳಿರುವುದಾಗಿ ಗೊತ್ತಾಗಿದೆ.</p>.<p>ಪತ್ರ ಪಡೆದು ಪರಿಶೀಲನೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಪುನಃ ವಿಚಾರಣೆಗೆ ದಿನಾಂಕ ನಿಗದಿಪಡಿಸಿ ನೋಟಿಸ್ ನೀಡಬೇಕೋ ಅಥವಾ ಬೇರೆ ಕಾನೂನು ಕ್ರಮ ಕೈಗೊಳ್ಳಬೇಕೋ ಎಂಬುದನ್ನು ಯೋಚಿಸುತ್ತಿದ್ದಾರೆ.</p>.<p><strong>ಇವನ್ನೂ ಓದಿ</strong><br />*<a href="https://cms.prajavani.net/karnataka-news/ramesh-jarkiholi-cd-case-young-womans-trial-begins-ccb-sit-rape-case-818634.html" itemprop="url">ಸಿ.ಡಿ. ಪ್ರಕರಣ: ಯುವತಿ ವಿಚಾರಣೆ ಆರಂಭ </a><br />*<a href="https://cms.prajavani.net/karnataka-news/cd-case-lawyer-shyamasundar-said-ramesh-jarkiholi-is-in-gokak-818635.html" itemprop="url">ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ಗೋಕಾಕ್ನಲ್ಲಿ ಇದ್ದಾರೆ -ವಕೀಲ ಶ್ಯಾಮಸುಂದರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿ.ಡಿ. ಪ್ರಕರಣದಲ್ಲಿ ಯುವತಿ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ನಂತರ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಬಂಧನ ಭೀತಿ ಶುರುವಾಗಿದ್ದು, ಇದೀಗ ಎಸ್ಐಟಿ ವಿಚಾರಣೆಗೂ ಅವರು ಗೈರಾಗಿದ್ದಾರೆ.</p>.<p>ನ್ಯಾಯಾಲಯದ ಎದುರು ಹಾಜರಾಗಿ ಸಿಆರ್ಪಿಸಿ 164ರಡಿ ಹೇಳಿಕೆ ನೀಡಿರುವ ಸಂತ್ರಸ್ತೆ, ವಿಚಾರಣೆ ಹಾಗೂ ಮಹಜರು ಪ್ರಕ್ರಿಯೆಗೆ ಸಹಕರಿಸಿದ್ದಾರೆ.</p>.<p>ಪ್ರಕರಣದ ಆರೋಪಿಯಾಗಿರುವ ರಮೇಶ ಜಾರಕಿಹೊಳಿ ಅವರನ್ನು ಶುಕ್ರವಾರ ಬೆಳಿಗ್ಗೆ ವಿಚಾರಣೆ ನಡೆಸಲು ಎಸ್ಐಟಿ ಸಿದ್ಧವಾಗಿತ್ತು. ಆದರೆ, ರಮೇಶ ಮಧ್ಯಾಹ್ನದವರೆಗೂ ವಿಚಾರಣೆಗೆ ಬರಲಿಲ್ಲ.</p>.<p>ಅವರ ಪರವಾಗಿ ಎಸ್ಐಟಿ ಕಚೇರಿಗೆ ಬಂದಿದ್ದ ವಕೀಲ ಶ್ಯಾಮಸುಂದರ್, ರಮೇಶ ಅವರು ನೀಡಿದ್ದ ಪತ್ರವೊಂದನ್ನು ಅಧಿಕಾರಿಗಳಿಗೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>'ನನಗೆ ವಿಪರೀತ ಜ್ವರವಿದೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದು, ವಿಶ್ರಾಂತಿ ಪಡೆಯುವಂಯೆ ವೈದ್ಯರು ತಿಳಿಸಿದ್ದಾರೆ. ಹೀಗಾಗಿ, ವಿಚಾರಣೆಗೆ ಬರಲು ಆಗುತ್ತಿಲ್ಲ' ಎಂದು ಪತ್ರದಲ್ಲಿ ಹೇಳಿರುವುದಾಗಿ ಗೊತ್ತಾಗಿದೆ.</p>.<p>ಪತ್ರ ಪಡೆದು ಪರಿಶೀಲನೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಪುನಃ ವಿಚಾರಣೆಗೆ ದಿನಾಂಕ ನಿಗದಿಪಡಿಸಿ ನೋಟಿಸ್ ನೀಡಬೇಕೋ ಅಥವಾ ಬೇರೆ ಕಾನೂನು ಕ್ರಮ ಕೈಗೊಳ್ಳಬೇಕೋ ಎಂಬುದನ್ನು ಯೋಚಿಸುತ್ತಿದ್ದಾರೆ.</p>.<p><strong>ಇವನ್ನೂ ಓದಿ</strong><br />*<a href="https://cms.prajavani.net/karnataka-news/ramesh-jarkiholi-cd-case-young-womans-trial-begins-ccb-sit-rape-case-818634.html" itemprop="url">ಸಿ.ಡಿ. ಪ್ರಕರಣ: ಯುವತಿ ವಿಚಾರಣೆ ಆರಂಭ </a><br />*<a href="https://cms.prajavani.net/karnataka-news/cd-case-lawyer-shyamasundar-said-ramesh-jarkiholi-is-in-gokak-818635.html" itemprop="url">ಸಿ.ಡಿ. ಪ್ರಕರಣ: ರಮೇಶ ಜಾರಕಿಹೊಳಿ ಗೋಕಾಕ್ನಲ್ಲಿ ಇದ್ದಾರೆ -ವಕೀಲ ಶ್ಯಾಮಸುಂದರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>