ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ ಪ್ರಕರಣ: ಡಿಕೆಶಿ‌ ಬಳಿ ರಮೇಶ ಜಾರಕಿಹೊಳಿ ಕ್ಷಮೆ‌ ಕೇಳಬೇಕು -ಎನ್‌ಎಸ್‌ಯುಐ

Last Updated 28 ಮಾರ್ಚ್ 2021, 8:23 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್‌ ವಿರುದ್ಧ ಮಾತನಾಡಿರುವ ರಮೇಶ್ ಜಾರಕಿಹೊಳಿ ಅವರು ಈ ಕೂಡಲೇ ಕ್ಷಮೆ‌ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎನ್‌ಎಸ್‌ಯುಐ ರಾಷ್ಟ್ರೀಯ ಸಂಚಾಲಕ ಫಹಾದ್ ಎಚ್ಚರಿಕೆ ನೀಡಿದ್ದಾರೆ.

ಸದ್ಯ ಕಬ್ಬನ್‌ಪಾರ್ಕ್ ಪೊಲೀಸರಿಗೆ ಲಿಖಿತ ದೂರು ನೀಡಿರುವ ಫಹಾದ್, ಹೈಕೋರ್ಟ್ ವಕೀಲರ ಮೂಲಕ ಮಾನನಷ್ಟ‌ ಮೊಕದ್ದಮೆ ಹಾಕಲು ತಯಾರಿ ನಡೆಸಿಕೊಂಡಿರುವುದಾಗಿಯೂ ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ವಿರುದ್ಧ ಅವಾಚ್ಯ ಶಬ್ಧದಿಂದ ಮಾತನಾಡಿರುವ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಮಾತಿನಿಂದ ಇಡೀ ರಾಜ್ಯ ನಗೆಪಾಟಲಿಗೀಡಾಗಿದೆ. ಒಂದು ವೇಳೆ ಅವರು ಡಿಕೆಶಿ ಬಳಿ ಕ್ಷಮೆ ಕೇಳಲಿಲ್ಲವೆಂದರೆ, ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುವುದಾಗಿಎಚ್ಚರಿಕೆ ನೀಡಿದ್ದಾರೆ.

ಇದು ಕೇವಲ ಠಾಣೆಯಲ್ಲಿ ದೂರು ದಾಖಲಿಸುವ ವಿಚಾರವಲ್ಲ. ತುಂಬಾ ಗಂಭೀರತೆ ಪಡೆದುಕೊಳ್ಳುತ್ತಿರುವ ವಿಚಾರ. ಹೀಗಾಗಿ ಪೊಲೀಸರು ಕ್ರಮ ಜರುಗಿಸಬೇಕು. ಕೋರ್ಟ್‌ನಲ್ಲೂ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT