ಪಕ್ಷದ ನಾಯಕಿಯರಾದ ಉಮಾಶ್ರೀ, ಜಯಮಾಲಾ ಮತ್ತು ಮಂಜುಳಾ ನಾಯ್ದು ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು ರಮೇಶ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ನಿಂದ ಬಿಜೆಪಿಗೆ ಬಂದ ಶಾಸಕರಿಂದ. ತಮಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲವೆಂದು ಅವರೆಲ್ಲ ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ದೂರು ಕೊಡುತ್ತಿದ್ದರು. ಅದಕ್ಕೆ ಬಿಜೆಪಿಯವರೇ ಈ ಸಿ.ಡಿ ಮಾಡಿದ್ದಾರೆ’ ಎಂದು ಆರೋಪಿಸಿದರು.