ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯ ನೆಪವೊಡ್ಡಿ ಜಾರಕಿಹೊಳಿಯಿಂದ ತನಿಖೆಗೆ ಅಸಹಕಾರ: ವಕೀಲ ಜಗದೀಶ್‌ ಆರೋಪ

Last Updated 7 ಏಪ್ರಿಲ್ 2021, 3:36 IST
ಅಕ್ಷರ ಗಾತ್ರ

ಬೆಂಗಳೂರು:‘ಅನಾರೋಗ್ಯದ ನೆಪವೊಡ್ಡಿ ಎಸ್‌ಐಟಿ ತನಿಖೆಗೆ ಸಹಕರಿಸದಅತ್ಯಾಚಾರ ಪ್ರಕರಣದ ಆರೋಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಂತ್ರಸ್ತ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್ ಹಾಗೂ ಕೆ.ಎನ್.ಜಗದೀಶ್ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಪತ್ರ ಬರೆದಿದ್ದಾರೆ.

‘ಸಂತ್ರಸ್ತೆಯನ್ನು ಹಲವು ಬಾರಿ ವಿಚಾರಣೆ ನಡೆಸಿರುವ ತನಿಖಾಧಿಕಾರಿಗಳು ಆರೋಪಿಯ ವಿಚಾರಣೆಗೆ ವಿನಾಯಿತಿ ನೀಡಿದಂತಿದೆ. ‘ವಿಚಾರಣೆಗೆ ಬರಬೇಕಿದ್ದ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಗೋಕಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸಚಿವ ಬೈರತಿ ಬಸವರಾಜು ಹೇಳುತ್ತಾರೆ. ಅಲ್ಲದೇ, ರಮೇಶ ಅವರಿಗೆ ಆರೋಗ್ಯ ಸಚಿವ ಕೆ.ಸುಧಾಕರ್ ಸ್ನೇಹಿತರಾಗಿದ್ದು, ಅವರ ಪ್ರಭಾವ ಬಳಸಿ, ಆಸ್ಪತ್ರೆ ಸಿಬ್ಬಂದಿ ಮೇಲೆ ಒತ್ತಡ ಹೇರಿ, ಕೊರೊನಾ ಪಾಸಿಟಿವ್ ನಕಲಿ ವರದಿ ಹಾಗೂ ಐಸಿಯುನಲ್ಲಿ ಚಿಕಿತ್ಸೆಯ ನಾಟಕ ಆಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ರಮೇಶ ಅವರಿಗೆ ನಿಜವಾಗಿ ಸೋಂಕು ತಗುಲಿರುವುದನ್ನು ಪರಿಶೀಲಿಸಲು ವೈದ್ಯರ ತಂಡವನ್ನು ಕಳುಹಿಸಿ ವರದಿ ಪಡೆಯಬೇಕು. ತನ್ನ ಪ್ರಭಾವ ಬಳಸಿ, ತನಿಖೆಯ ದಿಕ್ಕು ತಪ್ಪಿಸುತ್ತಿರುವ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT