<p><strong>ಬೆಂಗಳೂರು: </strong>ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯು ರಕ್ಷಣೆ ಕೋರಿ ವಿಡಿಯೊ ಬಿಡುಗಡೆ ಮಾಡುತ್ತಿದ್ದಂತೆ, ರಾಜ್ಯ ಮಹಿಳಾ ಆಯೋಗವು ಶನಿವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.</p>.<p>‘ಪ್ರಕರಣದಿಂದ ಮಾನಹಾನಿಯಾಗಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದೇನೆ. ನನಗೆ ರಕ್ಷಣೆ ಒದಗಿಸಬೇಕು’ ಎಂದು ಯುವತಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.</p>.<p>‘ಯುವತಿಯು ಭಯಗೊಂಡಿರುವುದು ಮತ್ತು ಆತಂಕದಲ್ಲಿರುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಅವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಗೃಹ ಸಚಿವರು ಮತ್ತು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಈ ಬಗ್ಗೆ ಆಯೋಗದಿಂದ ಪತ್ರ ಬರೆಯಲಾಗುವುದು. ಯುವತಿಗೆ ರಕ್ಷಣೆ ಒದಗಿಸಬೇಕು ಎಂದು ಕೋರಲಾಗುವುದು’ ಎಂದು ಆಯೋಗದ ಅಧ್ಯಕ್ಷ ಪ್ರಮೀಳಾ ನಾಯ್ಡು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಯುವತಿ ಎದೆಗುಂದಬಾರದು. ಧೈರ್ಯದಿಂದ ಸವಾಲು ಎದುರಿಸಬೇಕು’ ಎಂದೂ ಅವರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/ramesh-jarkiholi-scandal-woman-in-purported-sleaze-video-seeks-protection-813037.html" target="_blank">ಸಿ.ಡಿ. ಪ್ರಕರಣ: ಎಫ್ಐಆರ್ ದಾಖಲಾದ ಬೆನ್ನಲ್ಲೇ ವಿಡಿಯೊ ಹರಿಬಿಟ್ಟ ಯುವತಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯು ರಕ್ಷಣೆ ಕೋರಿ ವಿಡಿಯೊ ಬಿಡುಗಡೆ ಮಾಡುತ್ತಿದ್ದಂತೆ, ರಾಜ್ಯ ಮಹಿಳಾ ಆಯೋಗವು ಶನಿವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.</p>.<p>‘ಪ್ರಕರಣದಿಂದ ಮಾನಹಾನಿಯಾಗಿದ್ದು, ಹಲವು ಬಾರಿ ಆತ್ಮಹತ್ಯೆಗೂ ಪ್ರಯತ್ನಿಸಿದ್ದೇನೆ. ನನಗೆ ರಕ್ಷಣೆ ಒದಗಿಸಬೇಕು’ ಎಂದು ಯುವತಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.</p>.<p>‘ಯುವತಿಯು ಭಯಗೊಂಡಿರುವುದು ಮತ್ತು ಆತಂಕದಲ್ಲಿರುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಅವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಗೃಹ ಸಚಿವರು ಮತ್ತು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಈ ಬಗ್ಗೆ ಆಯೋಗದಿಂದ ಪತ್ರ ಬರೆಯಲಾಗುವುದು. ಯುವತಿಗೆ ರಕ್ಷಣೆ ಒದಗಿಸಬೇಕು ಎಂದು ಕೋರಲಾಗುವುದು’ ಎಂದು ಆಯೋಗದ ಅಧ್ಯಕ್ಷ ಪ್ರಮೀಳಾ ನಾಯ್ಡು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಯುವತಿ ಎದೆಗುಂದಬಾರದು. ಧೈರ್ಯದಿಂದ ಸವಾಲು ಎದುರಿಸಬೇಕು’ ಎಂದೂ ಅವರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/ramesh-jarkiholi-scandal-woman-in-purported-sleaze-video-seeks-protection-813037.html" target="_blank">ಸಿ.ಡಿ. ಪ್ರಕರಣ: ಎಫ್ಐಆರ್ ದಾಖಲಾದ ಬೆನ್ನಲ್ಲೇ ವಿಡಿಯೊ ಹರಿಬಿಟ್ಟ ಯುವತಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>