<p><strong>ಬೆಂಗಳೂರು:</strong> ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರವು ಪೂರ್ಣ ಪ್ರಮಾಣದಲ್ಲಿ ಚಟುವಟಿಕೆ ಆರಂಭಿಸಲು ಶೀಘ್ರವೇ ಅನುಮತಿ ನೀಡುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್ ಭರವಸೆ ನೀಡಿದ್ದಾರೆ.</p>.<p>ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ದೆಹಲಿಯಲ್ಲಿ ಪೊಖ್ರಿಯಾಲ್ ಅವರನ್ನು ಭೇಟಿಯಾಗಿ, ಅಧ್ಯಯನ ಪೀಠದ ಕಟ್ಟಡ ನಿರ್ಮಾಣ ಆರಂಭಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿ ಸಿದ ಪೊಖ್ರಿಯಾಲ್, ಕನ್ನಡಿಗರ ಬಹುದಿನಗಳ ಬೇಡಿಕೆಯಂತೆ ಆದಷ್ಟು ಶೀಘ್ರವೇ ಕಟ್ಟಡ ಪ್ರಾರಂಭಿಸಲು ಅನುಮತಿ ನೀಡಲಾಗುವುದು. ಯಾವುದೇ ಕಾರಣಕ್ಕೂ ವಿಳಂಬ ಮಾಡುವುದಿಲ್ಲ ಎಂದೂ ಹೇಳಿದರು.</p>.<p>ಕರ್ನಾಟಕ ಸರ್ಕಾರ ಕಳಿಸಿರುವ ವಿಸ್ತೃತ ಯೋಜನಾ ವರದಿ ಸಿಕ್ಕಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಬಳಿಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಇದರಿಂದ ದೇಶದ ಪ್ರತಿಯೊಂದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮನ್ನಣೆ ಸಿಗಲಿದೆ. ನಾಡು, ನುಡಿ, ಇತಿಹಾಸ, ಪರಂಪರೆ, ಸಂಪ್ರದಾಯಗಳು ಸೇರಿ ಸ್ಥಳೀಯ ಸಂಸ್ಕೃತಿಗೆ ಎಲ್ಲಿಯೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.</p>.<p>ಇದೇ ವೇಳೆ ಸಚಿವ ಸಿ.ಟಿ.ರವಿ ಅವರು ಈವರೆಗೂ ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯ ಚಟುವಟಿಕೆಯ ವಿಸ್ತೃತ ವರದಿಯನ್ನು ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು.</p>.<p>ಈ ಭೇಟಿ ವೇಳೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಜತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರವು ಪೂರ್ಣ ಪ್ರಮಾಣದಲ್ಲಿ ಚಟುವಟಿಕೆ ಆರಂಭಿಸಲು ಶೀಘ್ರವೇ ಅನುಮತಿ ನೀಡುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್ ಭರವಸೆ ನೀಡಿದ್ದಾರೆ.</p>.<p>ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ದೆಹಲಿಯಲ್ಲಿ ಪೊಖ್ರಿಯಾಲ್ ಅವರನ್ನು ಭೇಟಿಯಾಗಿ, ಅಧ್ಯಯನ ಪೀಠದ ಕಟ್ಟಡ ನಿರ್ಮಾಣ ಆರಂಭಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.</p>.<p>ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿ ಸಿದ ಪೊಖ್ರಿಯಾಲ್, ಕನ್ನಡಿಗರ ಬಹುದಿನಗಳ ಬೇಡಿಕೆಯಂತೆ ಆದಷ್ಟು ಶೀಘ್ರವೇ ಕಟ್ಟಡ ಪ್ರಾರಂಭಿಸಲು ಅನುಮತಿ ನೀಡಲಾಗುವುದು. ಯಾವುದೇ ಕಾರಣಕ್ಕೂ ವಿಳಂಬ ಮಾಡುವುದಿಲ್ಲ ಎಂದೂ ಹೇಳಿದರು.</p>.<p>ಕರ್ನಾಟಕ ಸರ್ಕಾರ ಕಳಿಸಿರುವ ವಿಸ್ತೃತ ಯೋಜನಾ ವರದಿ ಸಿಕ್ಕಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಬಳಿಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಇದರಿಂದ ದೇಶದ ಪ್ರತಿಯೊಂದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮನ್ನಣೆ ಸಿಗಲಿದೆ. ನಾಡು, ನುಡಿ, ಇತಿಹಾಸ, ಪರಂಪರೆ, ಸಂಪ್ರದಾಯಗಳು ಸೇರಿ ಸ್ಥಳೀಯ ಸಂಸ್ಕೃತಿಗೆ ಎಲ್ಲಿಯೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.</p>.<p>ಇದೇ ವೇಳೆ ಸಚಿವ ಸಿ.ಟಿ.ರವಿ ಅವರು ಈವರೆಗೂ ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯ ಚಟುವಟಿಕೆಯ ವಿಸ್ತೃತ ವರದಿಯನ್ನು ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು.</p>.<p>ಈ ಭೇಟಿ ವೇಳೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಜತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>