ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮೆ ಎಣ್ಣೆ ಬಿಡುಗಡೆ: ಕೇಂದ್ರ ಸರ್ಕಾರ

Last Updated 2 ನವೆಂಬರ್ 2022, 15:52 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ, ರಾಜ್ಯಕ್ಕೆ ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ.

‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ. ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು. ಈ ಮೂಲಕ ಕರಾವಳಿಯ ಮೀನುಗಾರರ ಹಿತ ಕಾಯಬೇಕು’ ಎಂದು ಉಡುಪಿಯ ಮೀನುಗಾರರ ಒಕ್ಕೂಟವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿತ್ತು.

ಕರಂದ್ಲಾಜೆ ಅವರು ಕೇಂದ್ರ ಪೆಟ್ರೋಲಿಯಂ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತ ಕಾಯುವಂತೆ ಮನವಿ ಮಾಡಿದ್ದರು.

ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ 2022-23ನೇ ಪಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿದೆ.

ಈ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆ ವಿತರಿಸಲಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT