‘ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಮೇಕೆದಾಟು ಯೋಜನೆಯ ಪ್ರಸ್ತಾವ ಈಗ ಕೇಂದ್ರ ಸರ್ಕಾರದ ಅಧೀನದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕೊಳೆಯುತ್ತಿದೆ. ಅದಕ್ಕೆ ಒಪ್ಪಿಗೆ ನೀಡುವುದನ್ನು ಬಿಟ್ಟು, ಕರ್ನಾಟಕ ಮತ್ತು ತಮಿಳುನಾಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲವೆ’ ಎಂದು ಪ್ರಶ್ನಿಸಿದ್ದಾರೆ.