‘ಪ್ರಸಕ್ತ ವರ್ಷ ರಸಗೊಬ್ಬರಕ್ಕೆ ಬೇಕಾದ ಕಚ್ಚಾವಸ್ತುಗಳ ಆಮದು ಕುಗ್ಗಿದೆ. ಅಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲೂ ಇಂಧನ ಕೊರತೆಯಾಗಿದೆ. ಹಾಗಾಗಿ, ಸರ್ಕಾರದ ಮುಂದೆ ರಸಗೊಬ್ಬರ ಉತ್ಪಾದನೆ ಮಾಡುವ ಯಾವುದೇ ಯೋಜನೆ ಇಲ್ಲ. ಬದಲಾಗಿ ಗೊಬ್ಬರ ಉತ್ಪಾದನೆಗೆ ಕೆಲ ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಅವರಿಗೆ ಬೇಕಾದ ಜಮೀನು, ವಿದ್ಯುತ್, ನೀರು, ರಿಯಾಯಿತಿ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಅವರು ನಗರದಲ್ಲಿ ಶನಿವಾರ ಮಾಧ್ಯಮದವರಿಗೆ ತಿಳಿಸಿದರು.