‘ಎರಡನೇ ಹಂತದ ನಗರಗಳಿಗೆ ಉದ್ಯಮಗಳು ಬರಬೇಕಾದರೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವು ಮೂಲಸೌಕರ್ಯಗಳು ಅಗತ್ಯ. ಇದಕ್ಕಾಗಿ ರಾಜ್ಯ ಸರ್ಕಾರ ದಾವಣಗೆರೆ, ಬಾಗಲಕೋಟೆಯ ಬಾದಾಮಿ, ರಾಯಚೂರು, ಕೊಪ್ಪಳ ಹಾಗೂ ಚಿಕ್ಕಮಗಳೂರಿನಲ್ಲಿ ದೇಶಿಯ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಮುಂದಾಗಿದೆ. ಮುಂದಿನ 18 ತಿಂಗಳಲ್ಲಿ ನಿಲ್ದಾಣಗಳು ಪೂರ್ಣಗೊಳ್ಳಲಿವೆ’ ಎಂದು ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.