‘ಸಿದ್ದರಾಮಯ್ಯ ಅವರಿಗೆ ಸರಿಯಾದ ಮೂಲ ಸ್ಥಾನವಿಲ್ಲ, ಹೀಗಿದ್ದಾಗ ಆರ್ಎಸ್ಎಸ್ ಮೂಲ ಕೆದುಕುತ್ತಾರೆ. ಮೂಲ ಜಾಗದಿಂದಲೇ ಅವರನ್ನು ಓಡಿಸಿದ್ದಾರೆ. ಅದನ್ನೆಲ್ಲ ಅವರು ಈಗ ಮರೆತಿದ್ದಾರೆ. ತುಷ್ಟೀಕರಣ ರಾಜಕಾರಣ ಮಾಡುತ್ತಾರೆ, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗೆ ಸದಾ ಕುಮ್ಮಕ್ಕು ನೀಡುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್, ಕೇರಳದಲ್ಲಿ ಕಮ್ಯುನಿಸ್ಟ್ ಈ ನಡೆ ಅನುಸರಿಸುತ್ತಿವೆ. ಇದರಿಂದಾಗಿ ಜನರೇ ಅವರನ್ನು ಸೋಲಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.