ಸೆಪ್ಟೆಂಬರ್ ಕೊನೆಯಲ್ಲಿ ಮತ್ತು ಅಕ್ಟೋಬರ್ ಆರಂಭದಲ್ಲಿ ಕೃಷ್ಣಾ ಮತ್ತು ಭೀಮಾ ನದಿಯಲ್ಲಿ ಉಂಟಾದ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ತಂಡಕ್ಕೆ ಮಾಹಿತಿ ನೀಡಿದ ಮುಖ್ಯಮಂತ್ರಿ, ‘ಭೂ ಕುಸಿತ ಮತ್ತು ನೆರೆಯಿಂದ 16 ಲಕ್ಷ ಹೆಕ್ಟೆರ್ಗೂ ಹೆಚ್ಚು ಕೃಷಿ ಭೂಮಿ ಹಾನಿಗೊಳಗಾಗಿದೆ. ಸುಮಾರು 34,794 ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ, ರಸ್ತೆ,
ಸೇತುವೆ ಸೇರಿದಂತೆ ಮೂಲಸೌಲಭ್ಯಗಳೂ ಕೊಚ್ಚಿಕೊಂಡು ಹೋಗಿವೆ’ ಎಂದರು.