ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ‘ಇದು ಜಲವಿವಾದದ ಭಾಗವಾಗಿರುವ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ನಡುವೆ ಪರಸ್ಪರ ನಂಬಿಕೆ ಹಾಗೂ ವಿಶ್ವಾಸದ ನಿರ್ಮಾಣಕ್ಕೆ ನೆರವಾಗಲಿದೆ. ಈ ಮೂಲಕ ಈ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯನ್ನು ಖಾತರಿಪಡಿಸುತ್ತದೆ’ ಎಂದು ತಿಳಿಸಿದ್ದಾರೆ.