ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಮತ್ತು ಅವರ ಆಪ್ತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರದ ಸಿಟಿಜನ್ ಸರ್ವಿಸ್ ಸೆಂಟರ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಈ ಹಗರಣ ಬೃಹದಾಕಾರವಾಗಿದ್ದು, ಮತದಾರರ ಮಾಹಿತಿ ಕಳವಿನ ಜತೆಗೆತೆರಿಗೆ ಹಣವನ್ನೂ ಲೂಟಿ ಹೊಡೆದಿದ್ದಾರೆ’ ಎಂದರು.