ಬೆಂಗಳೂರು: ‘ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ತಮ್ಮ ರಾಜೀನಾಮೆಯನ್ನು ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸಲ್ಲಿಸಿದ್ದು, ಅದು ಅಂಗೀಕಾರಗೊಂಡಿದೆ. ನೂತನ ಸಭಾಪತಿ ಆಯ್ಕೆಗೆ ರಾಜ್ಯಪಾಲರು ದಿನ ನಿಗದಿಪಡಿಸಲಿದ್ದಾರೆ’ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ. ಮಹಾಲಕ್ಷ್ಮಿ ತಿಳಿಸಿದರು.
‘ಸದನವನ್ನು ಇನ್ನೂ ಎರಡು ದಿನ ಮುಂದುವರಿಸುವಂತೆ ಬಿಜೆಪಿ ಪತ್ರ ನೀಡಿದೆ. ಶುಕ್ರವಾರ ಬೆಳಿಗ್ಗೆ ಕಲಾಪ ಸಮಿತಿ (ಬಿಎಸಿ) ನಡೆಯಲಿದೆ. ಈ ಸಭೆಯಲ್ಲಿ ಕಲಾಪ ಮುಂದುವರಿಸುವ ಬಗ್ಗೆ ತೀರ್ಮಾನ ಆಗಲಿದೆ’ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.