<p><strong>ಮೈಸೂರು:</strong> ‘ನಮ್ಮೂರು ಶೀಗೆಹಳ್ಳಿಗೆ ಸರಿಯಾಗಿ ಬಸ್ ಬರುವುದಿಲ್ಲ. ಕಾಲೇಜು ಕೂಡಾ ದೂರ. ಹೀಗಾಗಿ, ಬೇರೆ ಊರಿನಲ್ಲಿ ಇದ್ದುಕೊಂಡೇ ವ್ಯಾಸಂಗ ಮಾಡಿದೆ. ಅಡಿಕೆ ಕೃಷಿಕರಾದ ಅಪ್ಪ–ಅಮ್ಮ ನೀಡಿದ ಉತ್ತೇಜನವೂ ಕೈಹಿಡಿಯಿತು’.</p>.<p>ಮಂಗಳವಾರ ನಡೆಯುವ ಮೈಸೂರು ವಿಶ್ವವಿದ್ಯಾಲಯದ 101ನೇ ಘಟಿಕೋತ್ಸವದಲ್ಲಿ 20 ಚಿನ್ನದ ಪದಕ ಹಾಗೂ 4 ದತ್ತಿ ಬಹುಮಾನ ಪಡೆಯಲಿರುವ, ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಚೈತ್ರಾ ನಾರಾಯಣ ಹೆಗಡೆ ಹೆಮ್ಮೆಯಿಂದ ಹೀಗೆ ಹೇಳಿದರು. ಈ ಬಾರಿ ಅತಿ ಹೆಚ್ಚು ಚಿನ್ನದ ಪದಕ ಪಡೆಯುವ ಶ್ರೇಯ ಅವರದು.</p>.<p>ಎಂ.ಎಸ್ಸಿ ರಸಾಯನ ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಿರುವ ಅವರಿಗೆ ಇಲ್ಲಿನ ಕ್ರಾಫರ್ಡ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದಕ ಪ್ರದಾನ ಮಾಡಲಿದ್ದಾರೆ. ಯುವರಾಜ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಅವರಿಗೆ ಮೆಡಿಸಿನ್ ಕೆಮಿಸ್ಟ್ರಿಯಲ್ಲಿ ಸಂಶೋಧನೆ ಮಾಡುವ ಆಸಕ್ತಿ ಇದೆ.</p>.<p>‘ಪಿಜಿಯಲ್ಲಿ ಇದ್ದುಕೊಂಡೇ ಓದಿದೆ. ಹೆಚ್ಚು ಪದಕಗಳನ್ನು ಪಡೆಯಬೇಕೆಂಬ ಮಹದಾಸೆಯೂ ಇತ್ತು. ಆದರೆ, ಇಪ್ಪತ್ತು ಪದಕಗಳನ್ನು ಗಳಿಸುವೆ ಎಂದುಕೊಂಡಿರಲಿಲ್ಲ. ಈಗ ಅನಿರೀಕ್ಷಿತ ಫಲಿತಾಂಶದಿಂದ ಏಕಕಾಲಕ್ಕೆ ಅಚ್ಚರಿಯೂ ಸಂತೋಷವೂ ಆಗಿದೆ’ ಎಂದರು.</p>.<p>‘ಅಪ್ಪ ನಾರಾಯಣ ಹೆಗಡೆ ಹಾಗೂ ಅಮ್ಮ ಸುಮಂಗಳಾ ಹೆಗಡೆ ಅವರಿಗೆ ಈ ಎಲ್ಲ ಪದಕಗಳು ಸಮರ್ಪಿತ. ಅವರು ಯಾವತ್ತೂ ನನ್ನ ಮೇಲೆ ಒತ್ತಡ ಹಾಕಲಿಲ್ಲ. ಬದಲಾಗಿ ನಾನು ಇಷ್ಟಪಟ್ಟ ವಿಷಯ ಆಯ್ಕೆ ಮಾಡಿಕೊಂಡು ಓದಲು ಅವಕಾಶ ಮಾಡಿಕೊಟ್ಟರು. ಬೋಧಕರಿಗೂ ಧನ್ಯವಾದ ಅರ್ಪಿಸುವೆ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಪಿಯು ಓದುತ್ತಿದ್ದಾಗ ನಮ್ಮೂರಿಗೆ ಬೆಳಿಗ್ಗೆ, ಸಂಜೆ ಮಾತ್ರ ಬಸ್ ಬರುತಿತ್ತು. ಅದು ತಪ್ಪಿದರೆ ಪೋಷಕರೇ ಕರೆದುಕೊಂಡು ಹೋಗಬೇಕಿತ್ತು. ಈಗಲೂ ಈ ಪರಿಸ್ಥಿತಿ ಸುಧಾರಿಸಿಲ್ಲ. ವರ್ಕ್ ಫ್ರಂ ಹೋಂಗೆ ಸರಿಯಾಗಿ ನೆಟ್ವರ್ಕ್ ಸಿಗುವುದಿಲ್ಲ’ ಎಂದು<br />ನುಡಿದರು.</p>.<p>‘ಶಿರಸಿಯ ಚೈತನ್ಯ ಕಾಲೇಜಿನಲ್ಲಿ ಪಿಯುಸಿ ಓದಿದೆ. ಬಳಿಕ ಮೈಸೂರಿಗೆ ಬಂದು ಯುವರಾಜ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಪೂರೈಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಮ್ಮೂರು ಶೀಗೆಹಳ್ಳಿಗೆ ಸರಿಯಾಗಿ ಬಸ್ ಬರುವುದಿಲ್ಲ. ಕಾಲೇಜು ಕೂಡಾ ದೂರ. ಹೀಗಾಗಿ, ಬೇರೆ ಊರಿನಲ್ಲಿ ಇದ್ದುಕೊಂಡೇ ವ್ಯಾಸಂಗ ಮಾಡಿದೆ. ಅಡಿಕೆ ಕೃಷಿಕರಾದ ಅಪ್ಪ–ಅಮ್ಮ ನೀಡಿದ ಉತ್ತೇಜನವೂ ಕೈಹಿಡಿಯಿತು’.</p>.<p>ಮಂಗಳವಾರ ನಡೆಯುವ ಮೈಸೂರು ವಿಶ್ವವಿದ್ಯಾಲಯದ 101ನೇ ಘಟಿಕೋತ್ಸವದಲ್ಲಿ 20 ಚಿನ್ನದ ಪದಕ ಹಾಗೂ 4 ದತ್ತಿ ಬಹುಮಾನ ಪಡೆಯಲಿರುವ, ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಚೈತ್ರಾ ನಾರಾಯಣ ಹೆಗಡೆ ಹೆಮ್ಮೆಯಿಂದ ಹೀಗೆ ಹೇಳಿದರು. ಈ ಬಾರಿ ಅತಿ ಹೆಚ್ಚು ಚಿನ್ನದ ಪದಕ ಪಡೆಯುವ ಶ್ರೇಯ ಅವರದು.</p>.<p>ಎಂ.ಎಸ್ಸಿ ರಸಾಯನ ವಿಜ್ಞಾನ ವಿಷಯದಲ್ಲಿ ಸಾಧನೆ ಮಾಡಿರುವ ಅವರಿಗೆ ಇಲ್ಲಿನ ಕ್ರಾಫರ್ಡ್ ಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದಕ ಪ್ರದಾನ ಮಾಡಲಿದ್ದಾರೆ. ಯುವರಾಜ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಅವರಿಗೆ ಮೆಡಿಸಿನ್ ಕೆಮಿಸ್ಟ್ರಿಯಲ್ಲಿ ಸಂಶೋಧನೆ ಮಾಡುವ ಆಸಕ್ತಿ ಇದೆ.</p>.<p>‘ಪಿಜಿಯಲ್ಲಿ ಇದ್ದುಕೊಂಡೇ ಓದಿದೆ. ಹೆಚ್ಚು ಪದಕಗಳನ್ನು ಪಡೆಯಬೇಕೆಂಬ ಮಹದಾಸೆಯೂ ಇತ್ತು. ಆದರೆ, ಇಪ್ಪತ್ತು ಪದಕಗಳನ್ನು ಗಳಿಸುವೆ ಎಂದುಕೊಂಡಿರಲಿಲ್ಲ. ಈಗ ಅನಿರೀಕ್ಷಿತ ಫಲಿತಾಂಶದಿಂದ ಏಕಕಾಲಕ್ಕೆ ಅಚ್ಚರಿಯೂ ಸಂತೋಷವೂ ಆಗಿದೆ’ ಎಂದರು.</p>.<p>‘ಅಪ್ಪ ನಾರಾಯಣ ಹೆಗಡೆ ಹಾಗೂ ಅಮ್ಮ ಸುಮಂಗಳಾ ಹೆಗಡೆ ಅವರಿಗೆ ಈ ಎಲ್ಲ ಪದಕಗಳು ಸಮರ್ಪಿತ. ಅವರು ಯಾವತ್ತೂ ನನ್ನ ಮೇಲೆ ಒತ್ತಡ ಹಾಕಲಿಲ್ಲ. ಬದಲಾಗಿ ನಾನು ಇಷ್ಟಪಟ್ಟ ವಿಷಯ ಆಯ್ಕೆ ಮಾಡಿಕೊಂಡು ಓದಲು ಅವಕಾಶ ಮಾಡಿಕೊಟ್ಟರು. ಬೋಧಕರಿಗೂ ಧನ್ಯವಾದ ಅರ್ಪಿಸುವೆ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಪಿಯು ಓದುತ್ತಿದ್ದಾಗ ನಮ್ಮೂರಿಗೆ ಬೆಳಿಗ್ಗೆ, ಸಂಜೆ ಮಾತ್ರ ಬಸ್ ಬರುತಿತ್ತು. ಅದು ತಪ್ಪಿದರೆ ಪೋಷಕರೇ ಕರೆದುಕೊಂಡು ಹೋಗಬೇಕಿತ್ತು. ಈಗಲೂ ಈ ಪರಿಸ್ಥಿತಿ ಸುಧಾರಿಸಿಲ್ಲ. ವರ್ಕ್ ಫ್ರಂ ಹೋಂಗೆ ಸರಿಯಾಗಿ ನೆಟ್ವರ್ಕ್ ಸಿಗುವುದಿಲ್ಲ’ ಎಂದು<br />ನುಡಿದರು.</p>.<p>‘ಶಿರಸಿಯ ಚೈತನ್ಯ ಕಾಲೇಜಿನಲ್ಲಿ ಪಿಯುಸಿ ಓದಿದೆ. ಬಳಿಕ ಮೈಸೂರಿಗೆ ಬಂದು ಯುವರಾಜ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ಪೂರೈಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>