ಕೋವಿಡ್ ಮೂರನೇ ಅಲೆಯನ್ನು ತಡೆಯಲು ₹23,123 ಕೋಟಿ ನೀಡಲಾಗಿದೆ. ಅಲ್ಲದೆ, ಕೃಷಿ ಮತ್ತು ಇತರ ಪೂರಕ ಕ್ಷೇತ್ರಗಳಿಗೆ ಪುನಃ ₹1 ಲಕ್ಷ ಕೋಟಿಯನ್ನು ಕೇಂದ್ರ ಸರ್ಕಾರ ನೀಡಿದೆ. ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಅಭಿವೃದ್ಧಿಗೆ ಇದು ಬಳಕೆಯಾಗುತ್ತದೆ. ಇವನ್ನೆಲ್ಲ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಣ್ಣು ಬಿಟ್ಟು ನೋಡಲಿ ಎಂದು ಅವರು ವ್ಯಂಗ್ಯವಾಡಿದರು.