ನಮಗೆಲ್ಲ ತಿಳಿದಂತೆ ಮೈಸೂರಿನಲ್ಲಿ ಸಾಕಷ್ಟು ಆಕ್ಸಿಜನ್ ಸಿಲಿಂಡರ್ಗಳ ಶೇಖರಣೆ ಇದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪರಿಣಾಮ ಹೆಚ್ಚಿದೆ ಎಂಬ ಕಾರಣಕ್ಕೆ ಒಳ್ಳೆಯ ಉದ್ದೇಶದಿಂದಲೇ ಅವರು ಅಮ್ಲಜನಕ ಹೆಚ್ಚಾಗಿ ಇಟ್ಟುಕೊಂಡಿರಬಹುದು. ಆದರೆ. ಮೈಸೂರಿನಿಂದ ಕೊಡಗು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿಂದಲೇ ಆಗಬೇಕು. ಇದರಲ್ಲಿ ಯಾವುದೇ ವ್ಯತ್ಯಯ ಆಗಬಾರದು ಎಂದು ಅವರು ಹೇಳಿದ್ದಾರೆ.