ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಪಾ ಸಮಗ್ರ ಸಾಹಿತ್ಯ ಸಂಪುಟ: ₹ 1ಕೋಟಿ ಅನುದಾನಕ್ಕೆ ಮನವಿ

Last Updated 20 ಜನವರಿ 2022, 19:21 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ಅವರ ಸಮಗ್ರ ಸಾಹಿತ್ಯ ಸಂಪುಟ ಹೊರತರಲು ₹ 1 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಮನವಿ ಮಾಡಿದೆ.ಈ ಬಗ್ಗೆ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.

‘ಚಂಪಾ ಅವರು ಹಾವೇರಿ ಜಿಲ್ಲೆಯವರು. ಅದೇ ಜಿಲ್ಲೆಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅವರ ಸಮಗ್ರ ಸಾಹಿತ್ಯ ಸಂಪುಟವನ್ನು ಸಾಂಕೇತಿಕವಾಗಿ ಸಮ್ಮೇಳನದಲ್ಲಿ ಲೋಕಾರ್ಪಣೆಗೊಳಿಸಲು ಪರಿಷತ್ತು ನಿರ್ಧರಿಸಿದೆ. ಈ ಪ್ರಕಟಣೆ ಕಾರ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT