ಮೈಸೂರು: ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1061ನೇ ಜಯಂತಿ ಹಾಗೂ ಜನ ಸೇವಕ ಸಮಾವೇಶಕ್ಕಾಗಿ ಮೈಸೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ಮುಖ್ಯಮಂತ್ರಿ ಗೆ ಸಾಥದ ನೀಡಿದರು.
ಮುಖ್ಯಮಂತ್ರಿ ಭೇಟಿ ನೀಡುವುದಕ್ಕೂ ಮುನ್ನ ಸಚಿವ ಕೆ.ಎಸ್.ಈಶ್ವರಪ್ಪ ಚಾಮುಂಡೇಶ್ವರಿ ದರ್ಶನ ಪಡೆದರು.