ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕ ತಿರುಚಿ ಪ್ರದರ್ಶನ: ಕ್ರಮಕ್ಕೆ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಆಗ್ರಹ

ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ರವಾನೆ
Last Updated 2 ಜನವರಿ 2023, 21:56 IST
ಅಕ್ಷರ ಗಾತ್ರ

ಮೈಸೂರು: ‘ನನ್ನ ‘ಸಾಂಬಶಿವ ಪ್ರಹಸನ’ ನಾಟಕವನ್ನು ರಂಗಾಯಣದಲ್ಲಿ ಅಸಹ್ಯಕರವಾಗಿ ತಿರುಚಿ ಪ್ರದರ್ಶಿಸಲಾಗಿದೆ’ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಸೋಮವಾರ ಬರೆದಿದ್ದಾರೆ.

‘ಇದರಿಂದ ನನಗೆ ವಿಷಾದ
ವಾಗಿದೆ. ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇಬೇಕಿತ್ತು. ಆದರೆ, ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದೇ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ’ ಎಂದರು.

‘ನನ್ನ ನಾಟಕಗಳಲ್ಲಿ ವ್ಯಕ್ತಿಗತ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೇ ನಾಟಕ
ವನ್ನು ಪ್ರದರ್ಶಿಸಿದ್ದಕ್ಕೆ, ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೆ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೆ ಮತ್ತು ಈ ಅಹಿತಕರ ವಾತಾವರಣಕ್ಕೆ ಕಾರಣರಾದ ಸಂಬಂಧಪಟ್ಟ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

‘ಕಂಬಾರರು ಬರೆದ ಪತ್ರ ತಲುಪಿದ್ದು, ಅದನ್ನು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ’ ಎಂದು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಪ್ರತಿಕ್ರಿಯಿಸಿದರು.

ಶನಿವಾರ ಪ್ರದರ್ಶನಗೊಂಡ ನಾಟಕದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು. ಇದೀಗ, ಕಂಬಾರರು ಪತ್ರ ಬರೆದಿರುವುದನ್ನು ಸುಬ್ರಹ್ಮಣ್ಯ ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT