ಬೆಂಗಳೂರು: ‘ಮೇಲೇಳಲೂ ಸಾಧ್ಯವಿಲ್ಲದ ಕುಂಟನೊಬ್ಬ ಪೈಲ್ವಾನನಿಗೆ ಜಾಡಿಸಿ ಒದೆಯುತ್ತೇನೆ ಎಂದು ಹೇಳುವ ಹಾಗೆ ರಾಜ್ಯದಲ್ಲಿ ಜೆಡಿಎಸ್ ಪರಿಸ್ಥಿತಿ ಇದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚಿಗೆ ವ್ಯಂಗ್ಯವಾಡಿದ್ದಾರೆ. ಮಾತಿನ ಭರದಲ್ಲಿ ‘ಕುಂಟ’ ಎಂಬ ಪದ ಬಳಸುವ ಮೂಲಕ ಅವರು ಅಂಗವಿಕಲ ಸಮುದಾಯವನ್ನು ಅವಹೇಳನ ಮಾಡಿದ್ದಾರೆ’ ಎಂದು ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ದೂರಿದ್ದಾರೆ.