<p><strong>ಬೆಂಗಳೂರು: </strong>ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಆಯಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಬದಲಿಗೆ ಮಂಜೂರಾದ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿಯನ್ನು ಲೆಕ್ಕಾಚಾರ ಮಾಡುವಂತೆ ಸೂಚಿಸಿದೆ.</p>.<p>ಆಯಾ ತಾಲ್ಲೂಕನ್ನು ಒಂದು ಘಟಕವಾಗಿ ಪರಿಗಣಿಸಿ, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿ ನಿಗದಿಪಡಿಸುವಂತೆ 2020ರ ನವೆಂಬರ್ 12ರಂದು ಆದೇಶ ಹೊರಡಿಸಲಾಗಿತ್ತು. ಇದರಿಂದಾಗಿ ಅತ್ಯಧಿಕ ಸಂಖ್ಯೆಯ ಖಾಲಿ ಹುದ್ದೆಗಳಿರುವ 40 ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯಿಂದ ಹೊರಗುಳಿದಿದ್ದರು.</p>.<p>‘ವರ್ಗಾವಣೆ ಅವಕಾಶದಿಂದ ವಂಚಿತರಾಗಿದ್ದ 40ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರಿಗೆ ಈ ಆದೇಶದಿಂದ ಅನುಕೂಲವಾಗಲಿದೆ. ಈ ಎಲ್ಲ ಶಿಕ್ಷಕರೂ ಅರ್ಜಿ ಸಲ್ಲಿಸಬೇಕಿರುವುದರಿಂದ ಬುಧವಾರದಿಂದ ಆರಂಭವಾಗಬೇಕಿದ್ದ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಕೆಲವು ದಿನಗಳ ಕಾಲ ಮುಂದೂಡುವ ಸಾಧ್ಯತೆ ಇದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಆಯಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಬದಲಿಗೆ ಮಂಜೂರಾದ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿಯನ್ನು ಲೆಕ್ಕಾಚಾರ ಮಾಡುವಂತೆ ಸೂಚಿಸಿದೆ.</p>.<p>ಆಯಾ ತಾಲ್ಲೂಕನ್ನು ಒಂದು ಘಟಕವಾಗಿ ಪರಿಗಣಿಸಿ, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿ ನಿಗದಿಪಡಿಸುವಂತೆ 2020ರ ನವೆಂಬರ್ 12ರಂದು ಆದೇಶ ಹೊರಡಿಸಲಾಗಿತ್ತು. ಇದರಿಂದಾಗಿ ಅತ್ಯಧಿಕ ಸಂಖ್ಯೆಯ ಖಾಲಿ ಹುದ್ದೆಗಳಿರುವ 40 ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯಿಂದ ಹೊರಗುಳಿದಿದ್ದರು.</p>.<p>‘ವರ್ಗಾವಣೆ ಅವಕಾಶದಿಂದ ವಂಚಿತರಾಗಿದ್ದ 40ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರಿಗೆ ಈ ಆದೇಶದಿಂದ ಅನುಕೂಲವಾಗಲಿದೆ. ಈ ಎಲ್ಲ ಶಿಕ್ಷಕರೂ ಅರ್ಜಿ ಸಲ್ಲಿಸಬೇಕಿರುವುದರಿಂದ ಬುಧವಾರದಿಂದ ಆರಂಭವಾಗಬೇಕಿದ್ದ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಕೆಲವು ದಿನಗಳ ಕಾಲ ಮುಂದೂಡುವ ಸಾಧ್ಯತೆ ಇದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>