ಶ್ರವಣಬೆಳಗೊಳ: ಜೈನ ಮಠದ ಉತ್ತರಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರದ ಆಗಮ ಕೀರ್ತಿ ಅವರನ್ನು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಾಲ್ಕು ತಿಂಗಳ ಹಿಂದೆಯೇ ನೇಮಿಸಿದ್ದರು.
ಎರಡು ದಿನದ ಹಿಂದಷ್ಟೇ ಕ್ಷೇತ್ರದ ಹಿರಿಯರನ್ನು ಮಠಕ್ಕೆ ಕರೆಸಿದ್ದ ಸ್ವಾಮೀಜಿ, ‘ಆಗಮ ಕೀರ್ತಿಗ ಳನ್ನು ಉತ್ತರಾಧಿಕಾರಿಯಾಗಿ ನೇಮಿಸ
ಲಾಗಿದೆ. ನನ್ನ ಆರೋಗ್ಯ ಸರಿ ಉಳಿ ಯುತ್ತಿಲ್ಲ. ಹೀಗಾಗಿ ಅವರನ್ನೇ ಮುಂದುವರಿಸಬೇಕು’ ಎಂದು ತಿಳಿಸಿದ್ದರು. ‘ಆಗಮ ಕೀರ್ತಿ ಅವರನ್ನು ಉತ್ತರಾಧಿಕಾರಿಯಾಗಿ ಮಾಡಲಾಗುತ್ತಿದ್ದು, ಪಟ್ಟಾಧಿಕಾರ ಮಹೋತ್ಸವ ಮುಂದಿನ ದಿನಗಳಲ್ಲಿ ನಡೆಯಲಿದೆ’ ಎಂದು ಮಠದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.