ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳಾಸಾಹೇಬ ಲೋಕಾಪುರಗೆ ‘ಚಾವುಂಡರಾಯ ಪ್ರಶಸ್ತಿ’

Last Updated 17 ಅಕ್ಟೋಬರ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶನಿವಾರ ಈ ಆಯ್ಕೆ ನಡೆದಿದೆ. ಜೈನ ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹ 30 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ. ಆಯ್ಕೆ ಸಮಿತಿಯ ಸಭೆಯಲ್ಲಿ ಲೇಖಕಿ ಡಾ. ಪದ್ಮಿನಿ ನಾಗರಾಜ್, ಪರಿಷತ್ತಿನ
ಗೌರವ ಕಾರ್ಯದರ್ಶಿಗಳಾದ ರಾಜಶೇಖರ ಹತಗುಂದಿ ಹಾಗೂ ವ.ಚ. ಚನ್ನೇಗೌಡ ಇದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT