<p><strong>ಆನವಟ್ಟಿ (ಶಿವಮೊಗ್ಗ):</strong> ‘ವಿವೇಕ’ ಯೋಜನೆಯನ್ನು ‘ಅವಿವೇಕ’ ಎನ್ನುವ ಮೂಲಕವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಮಿ ವಿವೇಕಾನಂದರನ್ನು ಅವಮಾನಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಮಂಗಳವಾರ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ‘ವಿವೇಕ ಎಂದರೆ ಜ್ಞಾನ. ಆ ಹೆಸರಿನಲ್ಲಿಯೇ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕ್ರಾಂತಿಕಾರಿ ಹೆಜ್ಜೆಯನ್ನು ಸರ್ಕಾರ ಇಟ್ಟಿದೆ. ಅದನ್ನು ಸಹಿಸದೇ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದರು.</p>.<p>‘ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಯಾವುದೇ ನಾಯಕರನ್ನುಬೆಳೆಯಲು ಬಿಡದೇ ಚೂರು ಚೂರು ಮಾಡಿದರು. ಹಿಂದುಳಿದವರ ಹೃದಯ ಸಾಮ್ರಾಟರು ಅಂದರೆ ಅದು ರಾಜ್ಯದಲ್ಲಿ ದೇವರಾಜ ಅರಸು ಹಾಗೂ ಅವರ ಹಾದಿಯಲ್ಲಿ ನಡೆದು ಬಂದ ಎಸ್.ಬಂಗಾರಪ್ಪ ಮಾತ್ರ‘ ಎಂದರು.</p>.<p>ತಕರಾರಿನ ಕಾರಣ ದಂಡಾವತಿ ನೀರಾವರಿ ಯೋಜನೆ ವಿಳಂಬ: ‘ದಂಡಾವತಿ ನೀರಾವರಿ ಯೋಜನೆಯನ್ನು ಆಂಧ್ರಪ್ರದೇಶದ ತಕರಾರಿನ ಕಾರಣ ಸಂಪೂರ್ಣ ಸೊರಬ ತಾಲ್ಲೂಕಿಗೆ ವಿಸ್ತರಿಸಲು ಆಗಿರಲಿಲ್ಲ. ಶಾಸಕ ಕುಮಾರ್ ಬಂಗಾರಪ್ಪ ಅವರ ಮನವಿ ಮೇರೆಗೆ ಈಗ ಬೇರೆ ರೂಪದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ಸಿಎಂ ಭರವಸೆ ನೀಡಿದರು.</p>.<p>‘<strong>ಆತುರದ ನಿರ್ಧಾರ ಬೇಕಿರಲಿಲ್ಲ’</strong><br /><strong>ಚಾಮರಾಜನಗರ</strong>: ‘ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರದಲ್ಲಿ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವ ಅಗತ್ಯವಿರಲಿಲ್ಲ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಂಗಳವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕೇಸರಿ ಬಣ್ಣ ತ್ಯಾಗದ ಪ್ರತೀಕ. ಎಲ್ಲರೂ ಗೌರವ ಕೊಡುತ್ತಾರೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನವಟ್ಟಿ (ಶಿವಮೊಗ್ಗ):</strong> ‘ವಿವೇಕ’ ಯೋಜನೆಯನ್ನು ‘ಅವಿವೇಕ’ ಎನ್ನುವ ಮೂಲಕವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಮಿ ವಿವೇಕಾನಂದರನ್ನು ಅವಮಾನಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಮಂಗಳವಾರ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ‘ವಿವೇಕ ಎಂದರೆ ಜ್ಞಾನ. ಆ ಹೆಸರಿನಲ್ಲಿಯೇ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕ್ರಾಂತಿಕಾರಿ ಹೆಜ್ಜೆಯನ್ನು ಸರ್ಕಾರ ಇಟ್ಟಿದೆ. ಅದನ್ನು ಸಹಿಸದೇ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ’ ಎಂದರು.</p>.<p>‘ಸಿದ್ದರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗದ ಯಾವುದೇ ನಾಯಕರನ್ನುಬೆಳೆಯಲು ಬಿಡದೇ ಚೂರು ಚೂರು ಮಾಡಿದರು. ಹಿಂದುಳಿದವರ ಹೃದಯ ಸಾಮ್ರಾಟರು ಅಂದರೆ ಅದು ರಾಜ್ಯದಲ್ಲಿ ದೇವರಾಜ ಅರಸು ಹಾಗೂ ಅವರ ಹಾದಿಯಲ್ಲಿ ನಡೆದು ಬಂದ ಎಸ್.ಬಂಗಾರಪ್ಪ ಮಾತ್ರ‘ ಎಂದರು.</p>.<p>ತಕರಾರಿನ ಕಾರಣ ದಂಡಾವತಿ ನೀರಾವರಿ ಯೋಜನೆ ವಿಳಂಬ: ‘ದಂಡಾವತಿ ನೀರಾವರಿ ಯೋಜನೆಯನ್ನು ಆಂಧ್ರಪ್ರದೇಶದ ತಕರಾರಿನ ಕಾರಣ ಸಂಪೂರ್ಣ ಸೊರಬ ತಾಲ್ಲೂಕಿಗೆ ವಿಸ್ತರಿಸಲು ಆಗಿರಲಿಲ್ಲ. ಶಾಸಕ ಕುಮಾರ್ ಬಂಗಾರಪ್ಪ ಅವರ ಮನವಿ ಮೇರೆಗೆ ಈಗ ಬೇರೆ ರೂಪದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ಸಿಎಂ ಭರವಸೆ ನೀಡಿದರು.</p>.<p>‘<strong>ಆತುರದ ನಿರ್ಧಾರ ಬೇಕಿರಲಿಲ್ಲ’</strong><br /><strong>ಚಾಮರಾಜನಗರ</strong>: ‘ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರದಲ್ಲಿ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳುವ ಅಗತ್ಯವಿರಲಿಲ್ಲ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಂಗಳವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕೇಸರಿ ಬಣ್ಣ ತ್ಯಾಗದ ಪ್ರತೀಕ. ಎಲ್ಲರೂ ಗೌರವ ಕೊಡುತ್ತಾರೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>