ಕೇಂದ್ರ ನಾಗರಿಕ ವಿಮಾನಯಾನ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನಗರ ಸ್ಥಳೀಯ ಸಂಸ್ಥೆಗಳಿಗೆ ₹29.52 ಕೋಟಿ ನಿರ್ವಹಣಾ ನಿಧಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.ಬಳ್ಳಾರಿ, ಕಲಬುರ್ಗಿ, ಮೈಸೂರು ಮತ್ತು ವಿಜಯಪುರ ನಗರಪಾಲಿಕೆಗಳನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದರು.