ಬೆಂಗಳೂರು: ‘ಪಾಕಿಸ್ತಾನದ ವಿರುದ್ಧ 1971ರಲ್ಲಿ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ಜಯ ಗಳಿಸಿದ ಸ್ಮರಣಾರ್ಥ ವಿಜಯ ದಿವಸವನ್ನು ಇಂದು (ಬುಧವಾರ) ಆಚರಿಸಲಾಗುತ್ತಿದೆ.ಈ ಯುದ್ದದಲ್ಲಿ ತ್ಯಾಗ, ಬಲಿದಾನ ಮಾಡಿದ ಭಾರತೀಯ ಯೋಧರನ್ನು ಸ್ಮರಿಸುವ ಜೊತೆಗೆ, ಅವರ ಸುಖ, ದುಃಖ, ಸಂಕಷ್ಟದಲ್ಲಿ ಸಮಾನ ಭಾಗಿಗಳಾಗುವುದು ನಮ್ಮೆಲ್ಲರ ಕರ್ತವ್ಯ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.