ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ₹ 1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

Last Updated 19 ಮೇ 2021, 18:54 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವಅಸಂಘಟಿತ ಕಾರ್ಮಿಕರು ಮತ್ತು ರೈತರಿಗೆ ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ₹ 1,250 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ.

ಪ್ಯಾಕೇಜ್‌ನ ಪ್ರಮುಖ ಅಂಶಗಳು:

*ಹೂವು ಬೆಳೆಯುವ ರೈತರಿಗೆ ಹಾನಿ ಆಗಿದ್ದರೆ ಹೆಕ್ಟೇರ್‌ಗೆ ₹10,000 ನೀಡಲಾಗುವುದು. ಇದರಿಂದ 20 ಸಾವಿರ ರೈತರಿಗೆ ಅನುಕೂಲವಾಗಲಿದ್ದು, ₹12.73 ಕೋಟಿ ಖರ್ಚಾಗುತ್ತದೆ.

*ಹಣ್ಣು–ತರಕಾರಿ ಬೆಳೆಯುವ ರೈತರು ಹಾನಿಗೆ ಒಳಗಾಗಿದ್ದರೆ ಹೆಕ್ಟೇರ್‌ಗೆ ₹10,000 ಪರಿಹಾರ ನೀಡಲಾಗುವುದು. ಸುಮಾರು 69ಸಾವಿರ ರೈತರಿಗೆ ಪ್ರಯೋಜನ ಆಗಲಿದ್ದು, ಇದಕ್ಕೆ ₹69ಕೋಟಿ ಖರ್ಚಾಗಲಿದೆ.

*ಆಟೋ, ಟ್ಯಾಕ್ಸಿ, ಮ್ಯಾಕ್ಷಿಕ್ಯಾಬ್‌ಗಳ ಚಾಲಕರಿಗೆ ತಲಾ ₹3,000. ಇದಕ್ಕೆ ₹63ಕೋಟಿ ಖರ್ಚಾಗಲಿದೆ.

*ಕಟ್ಟಡ ಕಾರ್ಮಿಕರಿಗೆ ತಲಾ ₹3,000 ನೀಡಲಾಗುವುದು. ಇದಕ್ಕೆ ₹494ಕೋಟಿ ಖರ್ಚಾಗುತ್ತದೆ.

*ಅಸಂಘಟಿತ ವಲಯದ ಕಾರ್ಮಿಕರಿಗೆ ತಲಾ ₹2,000 ನೀಡಲಾಗುವುದು. ಇದರಲ್ಲಿ ಅಗಸರು, ಕ್ಷೌರಿಕರು ಸೇರಿ ಹಲವು ಕಸುಬುಗಳನ್ನು ಗುರುತಿಸಲಾಗಿದೆ. ಸುಮಾರು 3.04ಲಕ್ಷ ಜನರಿಗೆ ಇದರ ಪ್ರಯೋಜನ ಸಿಗಲಿದ್ದು, ₹60.89ಕೋಟಿ ಖರ್ಚಾಗಲಿದೆ

* ಬೀದಿ ವ್ಯಾಪಾರಿಗಳಿಗೆ ₹ 2,000 ನೀಡಲಾಗುವುದು. 2.20 ಲಕ್ಷ ಇದರ ಪ್ರಯೋಜನ ಸಿಗಲಿದ್ದು, ₹44ಕೋಟಿ ನೀಡಲಾಗುವುದು.

*ಕಲಾವಿದರು ಮತ್ತು ಕಲಾತಂಡಗಳಿಗೆ ₹3,000 ನೀಡಲಾಗುವುದು. 16,100 ಜನರಿಗೆ ಇದರ ಪ್ರಯೋಜನ ಸಿಗಲಿದೆ. ₹4.82ಕೋಟಿ ಖರ್ಚಾಗಲಿದೆ.

ಸಾಲದ ಕಂತು ಪಾವತಿ ಅವಧಿ ವಿಸ್ತರಣೆ:

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಕಂತಿನ ಮರುಪಾವತಿಯನ್ನು 31.07.21 ರವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಅವಧಿಯಲ್ಲಿನ ಬಡ್ಡಿ ಮೊತ್ತವನ್ನು ಸರ್ಕಾರವೇ ಪಾವತಿಸಲಿದೆ. ಇದಕ್ಕೆ ₹134.38ಕೋಟಿ ಖರ್ಚಾಗಲಿದೆ.

*ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ ಅಡಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವವರಿಗೆ ಮೇ ಮತ್ತು ಜೂನ್‌ ತಿಂಗಳು ತಲಾ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.

*ರಾಜ್ಯ ಸರ್ಕಾರದ ವತಿಯಿಂದ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವವರಿಗೆ ತಲಾ 10 ಕೆ.ಜಿ ಧಾನ್ಯ ಮತ್ತು ಎಪಿಎಲ್‌ ಕಾರ್ಡ್‌ದಾರರಿಗೆ ₹15 ರ ದರದಲ್ಲಿ 10 ಕೆ.ಜಿ ಆಹಾರಧಾನ್ಯವನ್ನು ನೀಡಲಾಗುವುದು.

* ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರಿಗೆ ಉಚಿತ ಆಹಾರ ವಿತರಿಸಲಾಗುವುದು. ಪ್ರತಿ ದಿನ 6 ಲಕ್ಷ ಜನರಿಗೆ ಇದರ ಪ್ರಯೋಜನ ಸಿಗಲಿದೆ. ಇದಕ್ಕೆ ₹25 ಕೋಟಿ ಖರ್ಚಾಗಲಿದೆ

* ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ 2.06 ಲಕ್ಷ ಕೋವಿಡ್‌ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, ಸರ್ಕಾರ ₹956 ಕೋಟಿ ಭರಿಸಿದೆ.

*18 ರಿಂದ 44 ವರ್ಷದವರಿಗೆ ಲಸಿಕೆ ಉಚಿತವಾಗಿ ನೀಡಲಿದ್ದು, ಇದಕ್ಕಾಗಿ 3 ಕೋಟಿ ಡೋಸ್‌ ಲಸಿಕೆಗೆ ಬೇಡಿಕೆ ಸಲ್ಲಿಸಲಾಗಿದ್ದು, ₹1000 ಕೋಟಿ ಖರ್ಚು ಮಾಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುತ್ತದೆ.

*ಎಸ್‌ಡಿಆರ್‌ಎಫ್‌ ಹಣದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ₹50 ಸಾವಿರ ನೀಡಲಾಗುತ್ತಿದ್ದು, ಒಟ್ಟು 6000 ಗ್ರಾಮ ಪಂಚಾಯತಿಗಳಿಗೆ ಇದರ ಲಾಭ ಸಿಗಲಿದೆ.

3 ದಿನಗಳಲ್ಲಿ 2150 ವೈದ್ಯರ ನೇಮಕ:

ಇನ್ನು ಮೂರು ದಿನಗಳಲ್ಲಿ 2150 ವೈದ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಲೈನ್‌ಮನ್‌ಗಳು, ಗ್ಯಾಸ್‌ ಸಿಲಿಂಡರ್‌ ಮನೆಗಳಿಗೆ ಸಾಗಿಸುವವರು ಮತ್ತು ಶಿಕ್ಷಕರನ್ನು ಕೊರೊನಾ ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸಿ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಇದ್ದರೂ ಸಂಕಷ್ಟದಲ್ಲಿ ಇರುವವರ ನೆರವಿಗೆ ಬಂದಿದ್ದೇವೆ. ನಿಮ್ಮ ಜತೆ ನಾವಿದ್ದೇವೆ. ಯಾರೂ ಧೈರ್ಯಗೆಡಬೇಕಿಲ್ಲ. ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ನೇರವಾಗಿ ಪಾವತಿ ಮಾಡಲಾಗುವುದು ಎಂದರು.

ಮೇ 24 ರ ನಂತರ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಮೇ 23 ರಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT