ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿಆರಂಭದಿಂದಲೂ ಭಾವನಾತ್ಮಕವಾಗಿ ಮಾತನಾಡಿದ ಅವರು, ಯಾರೂ ಇಲ್ಲದ ಕಾಲದಿಂದಲೂ ಪಕ್ಷಕ್ಕಾಗಿ ದುಡಿದಿರುವೆ. ಎಲ್ಲ ಸಂದರ್ಭದಲ್ಲೂ ಅಗ್ನಿ ಪರೀಕ್ಷೆ ಎದುರಿಸಿರುವೆ. 75 ವರ್ಷ ವಯಸ್ಸಾದರೂ ಎರಡುವರ್ಷ ಅಧಿಕಾರ ನಡೆಸಲು ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವರಿಷ್ಠರಿಗೆ ನಾನು ಚಿರ ಋಣಿ ಎಂದು ಕಣ್ಣೀರು ಹಾಕುತ್ತಾ ಹೇಳಿದರು.