ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಗುಣಮುಖರಾದ ಮುಖ್ಯಮಂತ್ರಿ ಯಡಿಯೂರಪ್ಪ: ಆಸ್ಪತ್ರೆಯಿಂದ ಡಿಸ್ಚಾರ್ಜ್

Last Updated 22 ಏಪ್ರಿಲ್ 2021, 9:08 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಸಿಎಂ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಹೀಗಾಗಿ, ಮಣಿಪಾಲ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಇಂದುಸಂಜೆಯೇ ಸಚಿವರ ಸಭೆ ಕರೆದು ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಡಿಸ್ಟಾರ್ಜ್ ಬಳಿಕ ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಮತ್ತು ಇನ್ನೆರಡು ವಿಧಾನಸಭಾ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದಾಗಲೆ ತೀವ್ರ ಜ್ವರದಿಂದ ಬಳಲಿದ್ದ ಅವರು, ಕಳೆದ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಕೋವಿಡ್‌ ಪಾಸಿಟಿವ್‌ ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.

ಈ ಹಿಂದೆ, ಲಾಕ್‌ಡೌನ್‌ ಸಂದರ್ಭದಲ್ಲೂ ಕೋವಿಡ್‌ ಸೋಂಕಿಗೆ ಒಳಗಾಗಿ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡನೇ ಬಾರಿ ಅವರಿಗೆ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT