ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ವ್ಯಾಪ್ತಿಯಲ್ಲಿರುವ ಕಾಶಿ ವಿಶ್ವನಾಥ ಧಾಮ ಯೋಜನೆಯ (ಕಾರಿಡಾರ್) ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೇದಘೋಷಗಳ ಮಧ್ಯೆ ಸೋಮವಾರ ಉದ್ಘಾಟಿಸಿದರು. ಪಟ್ಟಣದ ಪ್ರಾಚೀನ ಭವ್ಯತೆಯನ್ನು ಅವರು ನೆನಪಿಸಿಕೊಂಡರು. ದೇಶದ ಪ್ರಾಚೀನ ಭವ್ಯತೆಯನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ನವೀಕೃತ ದೇವಾಲಯವು ಭಕ್ತರಿಗೆ ನೀಡುತ್ತದೆ ಎಂದು ಹೇಳಿದರು.