'ಗೋ ಹತ್ಯೆ ನಿಷೇಧ ಕಾನೂನನ್ನು ನಮ್ಮ ಸರ್ಕಾರ ಬಿಗಿಗೊಳಿಸಿದೆ. ಆಗ ಕೆಲವರು ಗೋವುಗಳ ಕುರಿತು ಕೀಳಾಗಿ ಮಾತನಾಡಿದರು. ವಯಸ್ಸಾದ ಗೋವುಗಳನ್ನು ಯಾರು ಸಾಕುತ್ತಾರೆ? ರಕ್ಷಿಸುತ್ತಾರೆ ಎಂದು ಪ್ರಶ್ನಿಸಿದ್ದರು. ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ, ಸರ್ಕಾರಿ ಪ್ರಾಯೋಜಿತ ಗೋಶಾಲೆಗಳ ಸ್ಥಾಪನೆಯಿಂದ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ' ಎಂದರು.