<p><strong>ಬೆಂಗಳೂರು: </strong>‘ಕೋವಿಡ್ ಹೆಚ್ಚುತ್ತಿದೆ. ಹೆಚ್ಚಾದಾಗ ಕ್ರಮ ತೆಗೆದುಕೊಳ್ಳುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಆರ್.ಟಿ. ನಗರದಲ್ಲಿರುವ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಸಂಜೆ ಸಭೆ ನಡೆಯಲಿದೆ. ಸಭೆಯಲ್ಲಿ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತೇವೆ’ ಎಂದರು.</p>.<p>‘ಜನರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶ ಅಲ್ಲ. ಆದರೆ, ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಸಂಜೆ ಸಭೆಯ ಬಳಿಕ ಈ ಬಗ್ಗೆ ಮಾತನಾಡುತ್ತೇನೆ’ ಎಂದೂ ಹೇಳಿದರು.</p>.<p><strong>ನನ್ನ ಸೌಭಾಗ್ಯ: </strong>‘75ನೇ ಸ್ವಾತಂತ್ರ್ಯ ದಿನಾಚರಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. 75 ವರ್ಷ ನಡೆದು ಬಂದ ದಾರಿ, ನಡೆಯುವ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ’ ಎಂದರು.</p>.<p>‘ಹಲವಾರು ಸವಾಲುಗಳ ನಡುವೆ ನಮ್ಮ ಕನ್ನಡ ನಾಡು ದೇಶಕ್ಕೇ ಮಾದರಿಯಾಗಿದೆ. ನಾಡಿನ ಬಗ್ಗೆ ತಿಳಿಸುವ ಕೆಲಸ ಒಂದು ವರ್ಷ ಮಾಡುತ್ತೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೋವಿಡ್ ಹೆಚ್ಚುತ್ತಿದೆ. ಹೆಚ್ಚಾದಾಗ ಕ್ರಮ ತೆಗೆದುಕೊಳ್ಳುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಆರ್.ಟಿ. ನಗರದಲ್ಲಿರುವ ನಿವಾಸದ ಬಳಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಸಂಜೆ ಸಭೆ ನಡೆಯಲಿದೆ. ಸಭೆಯಲ್ಲಿ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತೇವೆ’ ಎಂದರು.</p>.<p>‘ಜನರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶ ಅಲ್ಲ. ಆದರೆ, ಕೋವಿಡ್ ಹೆಚ್ಚಾಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಸಂಜೆ ಸಭೆಯ ಬಳಿಕ ಈ ಬಗ್ಗೆ ಮಾತನಾಡುತ್ತೇನೆ’ ಎಂದೂ ಹೇಳಿದರು.</p>.<p><strong>ನನ್ನ ಸೌಭಾಗ್ಯ: </strong>‘75ನೇ ಸ್ವಾತಂತ್ರ್ಯ ದಿನಾಚರಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. 75 ವರ್ಷ ನಡೆದು ಬಂದ ದಾರಿ, ನಡೆಯುವ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ’ ಎಂದರು.</p>.<p>‘ಹಲವಾರು ಸವಾಲುಗಳ ನಡುವೆ ನಮ್ಮ ಕನ್ನಡ ನಾಡು ದೇಶಕ್ಕೇ ಮಾದರಿಯಾಗಿದೆ. ನಾಡಿನ ಬಗ್ಗೆ ತಿಳಿಸುವ ಕೆಲಸ ಒಂದು ವರ್ಷ ಮಾಡುತ್ತೇವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>