ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಪಂಚಮಸಾಲಿ ಸಮಯದಾಯ ಅಲ್ಲದೆ 15 ಸಮುದಾಯಗಳು ಮೀಸಲಾತಿ ಬಗ್ಗೆ ಬೇಡಿಕೆ ಇಟ್ಟಿವೆ. ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಬೇಕಿದೆ. ಈ ಕೆಲಸವನ್ನು ಆಯೋಗ ಮಾಡುತ್ತಿದೆ. ಮರಾಠರಿಗೆ ಮೀಸಲಾತಿ ನೀಡುವಾಗ ಅಲ್ಲಿನ ಸರ್ಕಾರ ಈ ಅಂಶಗಳನ್ನು ಪರಿಗಣಿಸಲಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ನಲ್ಲಿ ಸೋಲಾಯಿತು. ಏಕಾಏಕಿ ಮೀಸಲಾತಿ ನೀಡಿದರೆ ಸಮಸ್ಯೆ ಸೃಷ್ಟಿಯಾಗುತ್ತದೆ’ ಎಂದರು.