ಎಲ್ಲವೂ ಸದ್ಯದಲ್ಲೇ ಹೊರಬರಲಿದೆ: ‘ಸರ್ಕಾರದ ಮೇಲೆ ಶೇ 40 ರಷ್ಟು ಕಮಿಷನ್ ಆರೋಪದ ಹಿಂದೆ ನಿರ್ದೇಶಕರು, ನಿರ್ಮಾಪಕರು, ಸೂತ್ರಧಾರಿಗಳು ಯಾರ್ಯಾರು ಇದ್ದಾರೋ ಎಲ್ಲವೂ ಸದ್ಯದಲ್ಲೇ ಹೊರಬರಲಿದೆ. ಬಿಬಿಎಂಪಿ, ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸರ್ಕಾರಕ್ಕೆ ಕಪ್ಪುಚುಕ್ಕೆ ತರಬೇಕೆಂಬ ದುರದ್ದೇಶದಿಂದ ಕೆಂಪಣ್ಣ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.