ಬೆಂಗಳೂರು: ಯಾರ ಬಗೆಗಾದರೂ ಭಿನ್ನಾಭಿಪ್ರಾಯ ಇದ್ದರೆ, ಅದನ್ನು ಬಲವಾದಅಭಿಪ್ರಾಯಗಳೊಂದಿಗೆ ವಿರೋಧಿಸಬೇಕೇ ವಿನಃ ದೈಹಿಕ ಕಾರ್ಯದಿಂದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯನವರ ಕೊಡಗು ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಬಗ್ಗೆ, ಟ್ವೀಟ್ ಮಾಡಿರುವ ಬೊಮ್ಮಾಯಿ, ಹೀಗೆ ಹೇಳಿದ್ದಾರೆ.