ಮರುಘಾ ಶರಣರ ಬಂಧನ ವಿಳಂಬವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ಮಾಧ್ಯಮದವರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ಈ ಮಾತುಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಕಾನೂನು ಪ್ರಕಾರವೇ ಎಲ್ಲವೂ ನಡೆಯುತ್ತದೆ. ಹೀಗಾಗಿ ಈ (ತನಿಖೆ ಪ್ರಗತಿಯಲ್ಲಿರುವ) ಸಂದರ್ಭದಲ್ಲಿ ಮಾತನಾಡುವುದೂ ಸರಿಯಲ್ಲ. ತನಿಖಾಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆ' ಎಂದಿದ್ದಾರೆ.