ಉಡುಪಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿರುವ ಸಿಎಂ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಬಳಿ ತಲಾ 32 ಹೆಚ್ಚುವರಿ ಮತಗಳಿವೆ. ಬಿಜೆಪಿಯಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳು ಹೆಚ್ಚಾಗಿರುವುದರಿಂದ ಗೆಲುವು ಸುಲಭವಾಗಲಿದೆ. ಜತೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಸ್ನೇಹಿತರಿದ್ದು ಚುನಾವಣೆಯಲ್ಲಿ ನಡೆಯುವ ಬೆಳವಣಿಗೆಗಳನ್ನು ಕಾದುನೋಡೋಣ ಎಂದರು.