ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಮುರುಗೇಶ ನಿರಾಣಿ, ಶಂಕರ ಪಾಟೀಲ್ ಮುನೇನಕೊಪ್ಪ, ಬೈರತಿ ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ ಅವರೂ ಭಾಗಿಯಾಗಿದ್ದರು. ₹30 ಕೋಟಿ ವೆಚ್ಚದ ಈ ಯೋಜನೆಗೆ ಆರಂಭಿಕ ಹಂತದಲ್ಲಿ ರಾಜ್ಯ ಸರ್ಕಾರವು ₹ 10 ಕೋಟಿ ಬಿಡುಗಡೆ ಮಾಡಿದೆ.