ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕರ ನೇಮಕಾತಿ ಊರ್ಜಿತತ್ವ ಮುಂದುವರಿಕೆ: ಸಿಎಂ ಭರವಸೆ

Last Updated 13 ಅಕ್ಟೋಬರ್ 2020, 11:54 IST
ಅಕ್ಷರ ಗಾತ್ರ

ಬೆಂಗಳೂರು: ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ನೇಮಕಾತಿ ಊರ್ಜಿತತ್ವವನ್ನು ನೇಮಕಾತಿ ಆಗುವವರೆಗೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

ಈ ಹಿಂದೆ ನೇಮಕಾತಿ ಊರ್ಜಿತತ್ವದ ಅವಧಿ ಒಂದು ವರ್ಷದವರೆಗೆ ಇತ್ತು. ಕೋವಿಡ್‌ ಕಾರಣದಿಂದ ಕಾಲೇಜುಗಳು ಆರಂಭವಾಗಿಲ್ಲ. ನೇಮಕಗೊಂಡವರಿಗೆ ಅನುಕೂಲ ಮಾಡಿಕೊಡಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಉಪನ್ಯಾಸಕರು ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮತ್ತು ಕೌನ್ಸಲಿಂಗ್ ನಡೆದು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಆದರೆ ಕೋವಿಡ್-19 ಪರಿಸ್ಥಿತಿಗಳ ಹಿನ್ನಲೆಯಲ್ಲಿ ಇನ್ನೂ ಕಾಲೇಜುಗಳು ಆರಂಭವಾಗದೆ ಇರುವುದರಿಂದ ಬೋಧಕರಿಗೆ ವರದಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದ ಆತಂಕಗೊಂಡ ಉಪನ್ಯಾಸಕರು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT