ಬೆಂಗಳೂರು: ‘ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರ ಜತೆ ಚರ್ಚಿಸಿ ಬಂದಿದ್ದೇನೆ. ಎರಡು, ಮೂರು ದಿನಗಳಲ್ಲಿ ದೆಹಲಿಯಿಂದ ಪಟ್ಟಿ ಬರಬಹುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ‘ಹೊಯ್ಸಳ ಕ್ಯಾಬ್’ ಸೇವೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ದೆಹಲಿಯಿಂದ ಪಟ್ಟಿ ಬರಬೇಕು. ಆ ಬಳಿಕವೇ ಮುಂದಿನ ಪ್ರಕ್ರಿಯೆ ಆರಂಭಿಸಬಹುದು’ ಎಂದರು.
ಕನ್ನಡತಿ ಸುಧಾ ಉಮಾಶಂಕರ್ ಅವರು ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಸೇವೆ ಆರಂಭಿಸಿರುವುದು ಸ್ವಾಗತಾರ್ಹ. ಈವರೆಗೂ ನಗರಗಳಿಗೆ ಸೀಮಿತವಾಗಿದ್ದ ಆ್ಯಪ್ ಆಧಾರಿತ ಕ್ಯಾಬ್ ಸೇವೆ ಇನ್ನುಮುಂದೆ ರಾಜ್ಯದ ಎಲ್ಲ ಭಾಗಕ್ಕೂ ದೊರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.
5,000 ಕ್ಯಾಬ್ ಗಳೊಂದಿಗೆ ಈ ಸೇವೆ ಆರಂಭವಾಗುತ್ತಿದೆ. ಇದರಿಂದ ನೇರವಾಗಿ 5,000 ಜನರಿಗೆ ಉದ್ಯೋಗ ದೊರೆಯಲಿದೆ ಎಂದರು.